ಮೈಸೂರು

ಸ್ವಾತಂತ್ರ್ಯ ಹೋರಾಟಕ್ಕೆ ಬರದೆ ಸಂಘ ಪರಿವಾರ, ದೇಶಭಕ್ತಿ ಬಗ್ಗೆ ಮತಾಡ್ತಾರೆ ; ಸಿ.ಎಂ ವ್ಯಂಗ್ಯ

ಮೈಸೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿ.ಎಂ ವ್ಯಂಗ್ಯವಾಡಿದರು.‌

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, RSS ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಭಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.

“ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಡ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ ಎಂದರೆ.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರವತಂದ ತಿದ್ದುಪಡಿಯನ್ನು ಎತ್ತಿ ಹಿಡಿದು ಇದು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು ಎಂದರು.

ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

7 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago