ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ದಿನಗಳ ಕಾಲ ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದೆ. ಆ ವೇಳೆ ನೋಡಿದಾಗ ಅಲ್ಲಿ ಯಾವುದೇ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರಲಿಲ್ಲ. ಅಲ್ಲಿನ ಸರ್ಕಾರ ಮಹಾಕುಂಭಮೇಳಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮವಹಿಸಿತ್ತು ಎಂದರು.
ಇನ್ನೂ ಮಹಾಕುಂಭಮೇಳಕ್ಕೆ ಮೌನಿ ಅಮಾವಾಸ್ಯೆ ಪ್ರಯುಕ್ತ ಅಲ್ಲಿನ ಸರ್ಕಾರ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಅನಿರೀಕ್ಷಿತ ಸಾರ್ವಜನಿಕರು ಆಗಮಿಸಿರುವುದರಿಂದ ಈ ಘಟನೆ ಸಂಭವಿಸಿರಬಹುದು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…