ಮೈಸೂರು

ಮಹಾಕುಂಭಮೇಳದ ಕಾಲ್ತುಳಿತ ಪ್ರಕರಣ| ನಿರೀಕ್ಷೆಗೂ ಮೀರಿದ ಸಾರ್ವಜನಿಕರಿಂದ ಈ ಘಟನೆ ಸಂಭವಿಸಿದೆ: ಸಿ.ಟಿ.ರವಿ

ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ದಿನಗಳ ಕಾಲ ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದೆ. ಆ ವೇಳೆ ನೋಡಿದಾಗ ಅಲ್ಲಿ ಯಾವುದೇ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರಲಿಲ್ಲ. ಅಲ್ಲಿನ ಸರ್ಕಾರ ಮಹಾಕುಂಭಮೇಳಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮವಹಿಸಿತ್ತು ಎಂದರು.

ಇನ್ನೂ ಮಹಾಕುಂಭಮೇಳಕ್ಕೆ ಮೌನಿ ಅಮಾವಾಸ್ಯೆ ಪ್ರಯುಕ್ತ ಅಲ್ಲಿನ ಸರ್ಕಾರ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಅನಿರೀಕ್ಷಿತ ಸಾರ್ವಜನಿಕರು ಆಗಮಿಸಿರುವುದರಿಂದ ಈ ಘಟನೆ ಸಂಭವಿಸಿರಬಹುದು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago