ಮೈಸೂರು

ನದಿಗೆ ಹಾರಿದ ಕೇಬಲ್‌ ಆಪರೇಟರ್‌

ಹುಣಸೂರು : ಕೇಬಲ್ ಆಪರೇಟರ್ ಒಬ್ಬರು ನದಿಗೆ ಹಾರಿದ್ದು, ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ನಗರದ ಸಮೀಪದ ಮೂಕನಹಳ್ಳಿ ನಿವಾಸಿ ಕೇಬಲ್ ಆಪರೇಟರ್ ಪುರುಷೋತ್ತಮ್(೪೮) ನದಿಗೆ ಹಾರಿದವರು.

ಪುರುಷೋತ್ತಮ್ ಗ್ರಾಮದ ಡೇರಿ ನಿರ್ದೇಶಕರಾಗಿದ್ದರು. ಇವರು ಕೇಬಲ್ ಆಪರೇಟರ್ ವೃತ್ತಿ ನಡೆಸುತ್ತಿದ್ದರಲ್ಲದೆ ಆಟೋ, ಟ್ರಾಕ್ಟರ್ ಇಟ್ಟುಕೊಂಡಿದ್ದರು. ಶನಿವಾರ ರಾತ್ರಿ ೯ರ ಸುಮಾರಿಗೆ ಹೊಸ ಸೇತುವೆ ಬಳಿಯಲ್ಲಿ ಆಟೋ ನಿಲ್ಲಿಸಿ, ಮೊಬೈಲ್, ಚಪ್ಪಲಿಯನ್ನು ಅಲ್ಲೇ ಬಿಟ್ಟು ಲಕ್ಷ್ಮಣತೀರ್ಥ ನದಿಗೆ ಹಾರಿದ್ದಾರೆ. ಇದನ್ನು ಕಂಡ ದಾರಿ ಹೋಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದ ವೇಳೆ ಆಟೋ ಪುರುಷೋತ್ತಮ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಾಗಿದ್ದರಿಂದ ಭಾನುವಾರ ಬೆಳಿಗ್ಗೆ ನದಿಯಲ್ಲಿ ಬೋಟ್ ಮೂಲಕ ತಪಾಸಣೆ ನಡೆಸಿದರಾದರೂ ಶವ ಪತ್ತೆಯಾಗಿಲ್ಲ.

ಸ್ನೇಹಿತರಿಗೆ ಕರೆ ಮಾಡಿದ್ದರು : ನದಿಗೆ ಹಾರುವ ಮುನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ನದಿಗೆ ಹಾರಿ ಸಾಯುತ್ತೇನೆ ಎಂದು ಹೇಳಿದ್ದರು. ಕೊನೆಗೆ ಪುರುಷೋತ್ತಮ್ ಸಹೋದರ ತಾ.ಪಂ.ಮಾಜಿ ಸದಸ್ಯ ರವಿಪ್ರಸನ್ನ ಅವರಿಗೆ ವಿಷಯ ತಿಳಿಸಿದ್ದು, ಹುಡುಕಾಟ ನಡೆಸಿದ ವೇಳೆ ಹೊಸ ಸೇತುವೆ ಬಳಿ ನಿಲ್ಲಿಸಿದ್ದ ಆಟೋ ಇರುವುದು ಕಂಡುಬಂದಿದೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಥಿಕವಾಗಿ ಸಾಕಷ್ಟು ಅನುಕೂಲಸ್ಥರಾಗಿರುವ ಪುರುಷೋತ್ತಮ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago