ಮೈಸೂರು

ನದಿಗೆ ಹಾರಿದ ಕೇಬಲ್‌ ಆಪರೇಟರ್‌

ಹುಣಸೂರು : ಕೇಬಲ್ ಆಪರೇಟರ್ ಒಬ್ಬರು ನದಿಗೆ ಹಾರಿದ್ದು, ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ನಗರದ ಸಮೀಪದ ಮೂಕನಹಳ್ಳಿ ನಿವಾಸಿ ಕೇಬಲ್ ಆಪರೇಟರ್ ಪುರುಷೋತ್ತಮ್(೪೮) ನದಿಗೆ ಹಾರಿದವರು.

ಪುರುಷೋತ್ತಮ್ ಗ್ರಾಮದ ಡೇರಿ ನಿರ್ದೇಶಕರಾಗಿದ್ದರು. ಇವರು ಕೇಬಲ್ ಆಪರೇಟರ್ ವೃತ್ತಿ ನಡೆಸುತ್ತಿದ್ದರಲ್ಲದೆ ಆಟೋ, ಟ್ರಾಕ್ಟರ್ ಇಟ್ಟುಕೊಂಡಿದ್ದರು. ಶನಿವಾರ ರಾತ್ರಿ ೯ರ ಸುಮಾರಿಗೆ ಹೊಸ ಸೇತುವೆ ಬಳಿಯಲ್ಲಿ ಆಟೋ ನಿಲ್ಲಿಸಿ, ಮೊಬೈಲ್, ಚಪ್ಪಲಿಯನ್ನು ಅಲ್ಲೇ ಬಿಟ್ಟು ಲಕ್ಷ್ಮಣತೀರ್ಥ ನದಿಗೆ ಹಾರಿದ್ದಾರೆ. ಇದನ್ನು ಕಂಡ ದಾರಿ ಹೋಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದ ವೇಳೆ ಆಟೋ ಪುರುಷೋತ್ತಮ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಾಗಿದ್ದರಿಂದ ಭಾನುವಾರ ಬೆಳಿಗ್ಗೆ ನದಿಯಲ್ಲಿ ಬೋಟ್ ಮೂಲಕ ತಪಾಸಣೆ ನಡೆಸಿದರಾದರೂ ಶವ ಪತ್ತೆಯಾಗಿಲ್ಲ.

ಸ್ನೇಹಿತರಿಗೆ ಕರೆ ಮಾಡಿದ್ದರು : ನದಿಗೆ ಹಾರುವ ಮುನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ನದಿಗೆ ಹಾರಿ ಸಾಯುತ್ತೇನೆ ಎಂದು ಹೇಳಿದ್ದರು. ಕೊನೆಗೆ ಪುರುಷೋತ್ತಮ್ ಸಹೋದರ ತಾ.ಪಂ.ಮಾಜಿ ಸದಸ್ಯ ರವಿಪ್ರಸನ್ನ ಅವರಿಗೆ ವಿಷಯ ತಿಳಿಸಿದ್ದು, ಹುಡುಕಾಟ ನಡೆಸಿದ ವೇಳೆ ಹೊಸ ಸೇತುವೆ ಬಳಿ ನಿಲ್ಲಿಸಿದ್ದ ಆಟೋ ಇರುವುದು ಕಂಡುಬಂದಿದೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಥಿಕವಾಗಿ ಸಾಕಷ್ಟು ಅನುಕೂಲಸ್ಥರಾಗಿರುವ ಪುರುಷೋತ್ತಮ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

10 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

15 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

46 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

4 hours ago