ಮೈಸೂರು

ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿದ್ದು, ಕೃತಿಯಲ್ಲಿ ಪ್ರಥಮ ಮುದ್ರಣ 2023 ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು.

ಕಾವ್ಯ, ನವ ಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ, ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಜೀವನ ಚರಿತ್ರೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣ ಬರಹ, ಅನುವಾದ -1, ಅನುವಾದ-2, ಲೇಖಕರ ಮೊದಲ ಸ್ವಾತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷ್‌ಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಪ್ರಕಾರಗಳನ್ನು ಹೊಂದಿರುವ ಪುಸ್ತಕಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರಿನ ಜೆ.ಸಿ ರಸ್ತೆಯ ಎರಡನೇ ಮಹಡಿಯಲ್ಲಿರುವ ಕನ್ನಡ ಭವನದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರ ವಿಳಾಸಕ್ಕೆ ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-22211730 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago