ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್ವೇರ್ ಕಂಪೆನಿಯ ನವೋದಯ ಫೌಂಡೇಷನ್ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು.
ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಉದ್ಯಮಿಯಿಂದ ಕ್ಯಾಮೆರಾ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ಸೀಮಾ ಅವರು, ಪರಿಸರ ಸಂರಕ್ಷಣೆ ಕಾಳಜಿ ಹೊಂದಿರುವ ಮ್ಯಾಗ್ನಾ ಸಾಫ್ಟ್ವೇರ್ ಕಂಪೆನಿ ನಿರಂತರವಾಗಿ ನಾಗರಹೊಳೆ ಅರಣ್ಯ ಸಂರಕ್ಷಣೆಗೆ ಸಿಎಸ್ಆರ್ ಅನುದಾನದಿಂದ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಇವರ ಪರಿಸರ ಕಾಳಜಿಗೆ ಇಲಾಖೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.
ಅರಣ್ಯದಲ್ಲಿ ಹುಲಿ ಚಲನವಲನ ವೀಕ್ಷಣೆಗೆ ಕ್ಯಾಮೆರಾ ಟ್ರ್ಯಾಪಿಂಗ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈಗಾಗಲೇ ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಸಿ ನಿಗಾವಹಿಸಿದೆ. ಉದ್ಯಮಿ ನೀಡಿದ ಕ್ಯಾಮೆರಾವನ್ನು ಹುಲಿ ಯೋಜನೆಗೆ ಬಳಸಿಕೊಂಡು ಅರಣ್ಯದಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಸಹಕಾರವಾಗಲಿದೆ ಎಂದರು.
ಬೇಸಿಗೆಯಲ್ಲಿ ಅರಣ್ಯದಲ್ಲಿ ಕೊಳವೆ ಬಾವಿಯಿಂದ ಕೆರೆಗಳಿಗೆ ನೀರು ಹರಿಸಲು ಈ ಹಿಂದೆ ಡಿಸಿಎಫ್ ದಿ.ಮಣಿಕಂದನ್ ಸೋಲಾರ್ ಪಂಪ್ಸೆಟ್ ಅಳವಡಿಸಿ ಕೆರೆಗೆ ನೀರು ಸೇರಿಸುವ ಪ್ರಯತ್ನ ಯಶಸ್ವಿಯಾಗಿ ಅರಣ್ಯದಲ್ಲಿ ಹಲವು ಸ್ಥಳದಲ್ಲಿ ಕಾರ್ಯನಿರ್ವಹಿಸಿದೆ. ಅದೇ ಮಾದರಿಯಲ್ಲಿ ಉದ್ಯಮಿ ಟೈಗರ್ ರಮೇಶ್ ಸೋಲಾರ್ ಪಂಪ್ಸೆಟ್ ನೀಡಿದ್ದಾರೆ ಎಂದರು.
ಕ್ಯಾಮೆರಾ ಹಸ್ತಾಂತರ ಸಮಯದಲ್ಲಿ ಕಂಪೆನಿಯ ಗೋವಿಂದನ್ ತಿರುಮಲೈ, ಪರಮೇಶ್ ಮೂರ್ತಿ, ಕೊಯಮತ್ತೂರಿನ ಹರಿಸಾಂತರಾಮ್, ಅಂತರಸಂತೆ ವಲಯದ ವಲಯ ಅರಣ್ಯಾಧಿಕಾರಿ ಸಿದ್ದರಾಜು, ಪಶುವೈದ್ಯಾಧಿಕಾರಿ ಡಾ.ರಮೇಶ್, ಕಚೇರಿ ವ್ಯವಸ್ಥಾಪಕ ರಘು, ಮಂಜು, ಗೋಪಿ, ಇತರರು ಹಾಜರಿದ್ದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…