ಮೈಸೂರು

ಹುಲಿ ಗಣತಿಗಾಗಿ ಕ್ಯಾಮೆರ ಕೊಡುಗೆ

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು.

ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಉದ್ಯಮಿಯಿಂದ ಕ್ಯಾಮೆರಾ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ಸೀಮಾ ಅವರು, ಪರಿಸರ ಸಂರಕ್ಷಣೆ ಕಾಳಜಿ ಹೊಂದಿರುವ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿ ನಿರಂತರವಾಗಿ ನಾಗರಹೊಳೆ ಅರಣ್ಯ ಸಂರಕ್ಷಣೆಗೆ ಸಿಎಸ್‌ಆರ್ ಅನುದಾನದಿಂದ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಇವರ ಪರಿಸರ ಕಾಳಜಿಗೆ ಇಲಾಖೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.

ಅರಣ್ಯದಲ್ಲಿ ಹುಲಿ ಚಲನವಲನ ವೀಕ್ಷಣೆಗೆ ಕ್ಯಾಮೆರಾ ಟ್ರ್ಯಾಪಿಂಗ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈಗಾಗಲೇ ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಸಿ ನಿಗಾವಹಿಸಿದೆ. ಉದ್ಯಮಿ ನೀಡಿದ ಕ್ಯಾಮೆರಾವನ್ನು ಹುಲಿ ಯೋಜನೆಗೆ ಬಳಸಿಕೊಂಡು ಅರಣ್ಯದಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಸಹಕಾರವಾಗಲಿದೆ ಎಂದರು.

ಬೇಸಿಗೆಯಲ್ಲಿ ಅರಣ್ಯದಲ್ಲಿ ಕೊಳವೆ ಬಾವಿಯಿಂದ ಕೆರೆಗಳಿಗೆ ನೀರು ಹರಿಸಲು ಈ ಹಿಂದೆ ಡಿಸಿಎಫ್ ದಿ.ಮಣಿಕಂದನ್ ಸೋಲಾರ್ ಪಂಪ್‌ಸೆಟ್ ಅಳವಡಿಸಿ ಕೆರೆಗೆ ನೀರು ಸೇರಿಸುವ ಪ್ರಯತ್ನ ಯಶಸ್ವಿಯಾಗಿ ಅರಣ್ಯದಲ್ಲಿ ಹಲವು ಸ್ಥಳದಲ್ಲಿ ಕಾರ್ಯನಿರ್ವಹಿಸಿದೆ. ಅದೇ ಮಾದರಿಯಲ್ಲಿ ಉದ್ಯಮಿ ಟೈಗರ್ ರಮೇಶ್ ಸೋಲಾರ್ ಪಂಪ್‌ಸೆಟ್ ನೀಡಿದ್ದಾರೆ ಎಂದರು.

ಕ್ಯಾಮೆರಾ ಹಸ್ತಾಂತರ ಸಮಯದಲ್ಲಿ ಕಂಪೆನಿಯ ಗೋವಿಂದನ್ ತಿರುಮಲೈ, ಪರಮೇಶ್ ಮೂರ್ತಿ, ಕೊಯಮತ್ತೂರಿನ ಹರಿಸಾಂತರಾಮ್, ಅಂತರಸಂತೆ ವಲಯದ ವಲಯ ಅರಣ್ಯಾಧಿಕಾರಿ ಸಿದ್ದರಾಜು, ಪಶುವೈದ್ಯಾಧಿಕಾರಿ ಡಾ.ರಮೇಶ್, ಕಚೇರಿ ವ್ಯವಸ್ಥಾಪಕ ರಘು, ಮಂಜು, ಗೋಪಿ, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

12 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

16 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

16 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

17 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

17 hours ago