ಮೈಸೂರು

ಹುಲಿ ಗಣತಿಗಾಗಿ ಕ್ಯಾಮೆರ ಕೊಡುಗೆ

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು.

ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಉದ್ಯಮಿಯಿಂದ ಕ್ಯಾಮೆರಾ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ಸೀಮಾ ಅವರು, ಪರಿಸರ ಸಂರಕ್ಷಣೆ ಕಾಳಜಿ ಹೊಂದಿರುವ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿ ನಿರಂತರವಾಗಿ ನಾಗರಹೊಳೆ ಅರಣ್ಯ ಸಂರಕ್ಷಣೆಗೆ ಸಿಎಸ್‌ಆರ್ ಅನುದಾನದಿಂದ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಇವರ ಪರಿಸರ ಕಾಳಜಿಗೆ ಇಲಾಖೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.

ಅರಣ್ಯದಲ್ಲಿ ಹುಲಿ ಚಲನವಲನ ವೀಕ್ಷಣೆಗೆ ಕ್ಯಾಮೆರಾ ಟ್ರ್ಯಾಪಿಂಗ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈಗಾಗಲೇ ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಸಿ ನಿಗಾವಹಿಸಿದೆ. ಉದ್ಯಮಿ ನೀಡಿದ ಕ್ಯಾಮೆರಾವನ್ನು ಹುಲಿ ಯೋಜನೆಗೆ ಬಳಸಿಕೊಂಡು ಅರಣ್ಯದಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಸಹಕಾರವಾಗಲಿದೆ ಎಂದರು.

ಬೇಸಿಗೆಯಲ್ಲಿ ಅರಣ್ಯದಲ್ಲಿ ಕೊಳವೆ ಬಾವಿಯಿಂದ ಕೆರೆಗಳಿಗೆ ನೀರು ಹರಿಸಲು ಈ ಹಿಂದೆ ಡಿಸಿಎಫ್ ದಿ.ಮಣಿಕಂದನ್ ಸೋಲಾರ್ ಪಂಪ್‌ಸೆಟ್ ಅಳವಡಿಸಿ ಕೆರೆಗೆ ನೀರು ಸೇರಿಸುವ ಪ್ರಯತ್ನ ಯಶಸ್ವಿಯಾಗಿ ಅರಣ್ಯದಲ್ಲಿ ಹಲವು ಸ್ಥಳದಲ್ಲಿ ಕಾರ್ಯನಿರ್ವಹಿಸಿದೆ. ಅದೇ ಮಾದರಿಯಲ್ಲಿ ಉದ್ಯಮಿ ಟೈಗರ್ ರಮೇಶ್ ಸೋಲಾರ್ ಪಂಪ್‌ಸೆಟ್ ನೀಡಿದ್ದಾರೆ ಎಂದರು.

ಕ್ಯಾಮೆರಾ ಹಸ್ತಾಂತರ ಸಮಯದಲ್ಲಿ ಕಂಪೆನಿಯ ಗೋವಿಂದನ್ ತಿರುಮಲೈ, ಪರಮೇಶ್ ಮೂರ್ತಿ, ಕೊಯಮತ್ತೂರಿನ ಹರಿಸಾಂತರಾಮ್, ಅಂತರಸಂತೆ ವಲಯದ ವಲಯ ಅರಣ್ಯಾಧಿಕಾರಿ ಸಿದ್ದರಾಜು, ಪಶುವೈದ್ಯಾಧಿಕಾರಿ ಡಾ.ರಮೇಶ್, ಕಚೇರಿ ವ್ಯವಸ್ಥಾಪಕ ರಘು, ಮಂಜು, ಗೋಪಿ, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago