ಮೈಸೂರು

ಹುಲಿ ಗಣತಿಗಾಗಿ ಕ್ಯಾಮೆರ ಕೊಡುಗೆ

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು.

ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಉದ್ಯಮಿಯಿಂದ ಕ್ಯಾಮೆರಾ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ಸೀಮಾ ಅವರು, ಪರಿಸರ ಸಂರಕ್ಷಣೆ ಕಾಳಜಿ ಹೊಂದಿರುವ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿ ನಿರಂತರವಾಗಿ ನಾಗರಹೊಳೆ ಅರಣ್ಯ ಸಂರಕ್ಷಣೆಗೆ ಸಿಎಸ್‌ಆರ್ ಅನುದಾನದಿಂದ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಇವರ ಪರಿಸರ ಕಾಳಜಿಗೆ ಇಲಾಖೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.

ಅರಣ್ಯದಲ್ಲಿ ಹುಲಿ ಚಲನವಲನ ವೀಕ್ಷಣೆಗೆ ಕ್ಯಾಮೆರಾ ಟ್ರ್ಯಾಪಿಂಗ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈಗಾಗಲೇ ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಸಿ ನಿಗಾವಹಿಸಿದೆ. ಉದ್ಯಮಿ ನೀಡಿದ ಕ್ಯಾಮೆರಾವನ್ನು ಹುಲಿ ಯೋಜನೆಗೆ ಬಳಸಿಕೊಂಡು ಅರಣ್ಯದಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಸಹಕಾರವಾಗಲಿದೆ ಎಂದರು.

ಬೇಸಿಗೆಯಲ್ಲಿ ಅರಣ್ಯದಲ್ಲಿ ಕೊಳವೆ ಬಾವಿಯಿಂದ ಕೆರೆಗಳಿಗೆ ನೀರು ಹರಿಸಲು ಈ ಹಿಂದೆ ಡಿಸಿಎಫ್ ದಿ.ಮಣಿಕಂದನ್ ಸೋಲಾರ್ ಪಂಪ್‌ಸೆಟ್ ಅಳವಡಿಸಿ ಕೆರೆಗೆ ನೀರು ಸೇರಿಸುವ ಪ್ರಯತ್ನ ಯಶಸ್ವಿಯಾಗಿ ಅರಣ್ಯದಲ್ಲಿ ಹಲವು ಸ್ಥಳದಲ್ಲಿ ಕಾರ್ಯನಿರ್ವಹಿಸಿದೆ. ಅದೇ ಮಾದರಿಯಲ್ಲಿ ಉದ್ಯಮಿ ಟೈಗರ್ ರಮೇಶ್ ಸೋಲಾರ್ ಪಂಪ್‌ಸೆಟ್ ನೀಡಿದ್ದಾರೆ ಎಂದರು.

ಕ್ಯಾಮೆರಾ ಹಸ್ತಾಂತರ ಸಮಯದಲ್ಲಿ ಕಂಪೆನಿಯ ಗೋವಿಂದನ್ ತಿರುಮಲೈ, ಪರಮೇಶ್ ಮೂರ್ತಿ, ಕೊಯಮತ್ತೂರಿನ ಹರಿಸಾಂತರಾಮ್, ಅಂತರಸಂತೆ ವಲಯದ ವಲಯ ಅರಣ್ಯಾಧಿಕಾರಿ ಸಿದ್ದರಾಜು, ಪಶುವೈದ್ಯಾಧಿಕಾರಿ ಡಾ.ರಮೇಶ್, ಕಚೇರಿ ವ್ಯವಸ್ಥಾಪಕ ರಘು, ಮಂಜು, ಗೋಪಿ, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

1 hour ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

5 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago