ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೈಬರ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 6.30 ಲಕ್ಷ ಮೌಲ್ಯದ 21 ಕೆಜಿ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಮೂವರು ಬಂಧಿತರನ್ನು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಒಡಿಶಾದಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.
ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಬಳಿಕವೇ ಇನ್ನೂ ಹೆಚ್ಚಿನ ಸತ್ಯಾಸತ್ಯತೆ ಹೊರಬರಲಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…