ಎಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು- ಮಾನಂದವಾಡಿ ಹೆದ್ದಾರಿಯ ಕೋಳಗಾಲ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಬೆಳಿಗ್ಗೆ ೮.೩೦ ಸಂದರ್ಭದಲ್ಲಿ ಪಟ್ಟಣದ ವಡ್ಡರಗುಡಿ ಗ್ರಾಮದ ನಿವಾಸಿಗಳಾದ, ಪುರಸಭಾ ಸದಸ್ಯ ಸೋಮಶೇಖರ್ ಅವರ ಸಹೋದರಿಯ ಪುತ್ರರಾದ ಕೇಶವ, ಶ್ರೀನಿವಾಸ್, ನವೀನ, ಮದನ್ ಎಂಬವರು ಮೈಸೂರಿಗೆ ಕೆಲಸಕ್ಕಾಗಿ ಹೋಗುತ್ತಿದ್ದರು.
ಅದೇ ರಸ್ತೆಯಲ್ಲಿ ಮೈಸೂರು ಕಡೆಯಿಂದ ಚಿಕ್ಕದೇವಮ್ಮ ಬೆಟ್ಟಕ್ಕೆ ಪೂಜೆಗಾಗಿ ೪ ಕಾರುಗಳ ಮೂಲಕ ಮಂಡ್ಯ ಮೂಲದವರು ಬರುತ್ತಿದ್ದರು. ಮುಂದೆ ಬರುತ್ತಿದ್ದ ಮಂಡ್ಯ ಮೂಲದ ಬಲೆನೋ ಕಾರು ಎದುರಿಗೆ ಬರುತ್ತಿದ್ದ ವಡ್ಡರಗುಡಿಯವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರುಗಳು ಜಖಂಗೊಂಡವು. ಎರಡೂ ಕಾರುಗಳಲ್ಲಿ ಏರ್ಬ್ಯಾಗ್ಗಳು ಓಪನ್ ಆಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ವಡ್ಡರಗುಡಿ ಗ್ರಾಮದ ನಾಲ್ವರು ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದಾಗ ಅಕ್ಕಪಕ್ಕದ ನಿವಾಸಿಗಳು ಆರೈಕೆ ಮಾಡಿ ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದರು. ಇವರಲ್ಲಿ ಮದನ್ ಮತ್ತು ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.
ಮಂಡ್ಯದ ನಿವಾಸಿಗಳು ಅಪಘಾತವಾಗುತ್ತಿದ್ದಂತೆ ಹಿಂಬದಿಯಿಂದ ಬರುತ್ತಿದ್ದ ೩ ಕಾರುಗಳಲ್ಲಿ ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಮಂಡ್ಯ ಮೂಲದ ಇಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಮೂಲದವರ ಹೆಸರು ತಿಳಿದುಬಂದಿಲ್ಲ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…