ಮೈಸೂರು

ಕಾರುಗಳ ನಡುವೆ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ

ಎಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು- ಮಾನಂದವಾಡಿ ಹೆದ್ದಾರಿಯ ಕೋಳಗಾಲ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಬೆಳಿಗ್ಗೆ ೮.೩೦ ಸಂದರ್ಭದಲ್ಲಿ ಪಟ್ಟಣದ ವಡ್ಡರಗುಡಿ ಗ್ರಾಮದ ನಿವಾಸಿಗಳಾದ, ಪುರಸಭಾ ಸದಸ್ಯ ಸೋಮಶೇಖರ್ ಅವರ ಸಹೋದರಿಯ ಪುತ್ರರಾದ ಕೇಶವ, ಶ್ರೀನಿವಾಸ್, ನವೀನ, ಮದನ್ ಎಂಬವರು ಮೈಸೂರಿಗೆ ಕೆಲಸಕ್ಕಾಗಿ ಹೋಗುತ್ತಿದ್ದರು.

ಅದೇ ರಸ್ತೆಯಲ್ಲಿ ಮೈಸೂರು ಕಡೆಯಿಂದ ಚಿಕ್ಕದೇವಮ್ಮ ಬೆಟ್ಟಕ್ಕೆ ಪೂಜೆಗಾಗಿ ೪ ಕಾರುಗಳ ಮೂಲಕ ಮಂಡ್ಯ ಮೂಲದವರು ಬರುತ್ತಿದ್ದರು. ಮುಂದೆ ಬರುತ್ತಿದ್ದ ಮಂಡ್ಯ ಮೂಲದ ಬಲೆನೋ ಕಾರು ಎದುರಿಗೆ ಬರುತ್ತಿದ್ದ ವಡ್ಡರಗುಡಿಯವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರುಗಳು ಜಖಂಗೊಂಡವು. ಎರಡೂ ಕಾರುಗಳಲ್ಲಿ ಏರ್‌ಬ್ಯಾಗ್‌ಗಳು ಓಪನ್ ಆಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ವಡ್ಡರಗುಡಿ ಗ್ರಾಮದ ನಾಲ್ವರು ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದಾಗ ಅಕ್ಕಪಕ್ಕದ ನಿವಾಸಿಗಳು ಆರೈಕೆ ಮಾಡಿ ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದರು. ಇವರಲ್ಲಿ ಮದನ್ ಮತ್ತು ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.

ಮಂಡ್ಯದ ನಿವಾಸಿಗಳು ಅಪಘಾತವಾಗುತ್ತಿದ್ದಂತೆ ಹಿಂಬದಿಯಿಂದ ಬರುತ್ತಿದ್ದ ೩ ಕಾರುಗಳಲ್ಲಿ ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಮಂಡ್ಯ ಮೂಲದ ಇಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಮೂಲದವರ ಹೆಸರು ತಿಳಿದುಬಂದಿಲ್ಲ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

7 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

7 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago