Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕಾರು ಡಿಕ್ಕಿ : ಸ್ಕೂಟರ್‌ ಸವಾರ ಸಾವು

accident (1)

ಸಾಲಿಗ್ರಾಮ : ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮೂಡಲಬೀಡು ಗೇಟ್ ಬಳಿ ಭಾನುವಾರ ನಡೆದಿದೆ.

ಪಟ್ಟಣದ ರಾಂಪುರ ಬಡಾವಣೆಯ ಸಣ್ಣನಿಂಗನಾಯಕ (೫೦) ಮೃತಪಟ್ಟವರು.

ತಾಲ್ಲೂಕಿನ ಭೇರ್ಯ ಕಡೆಯಿಂದ ಸಾಲಿಗ್ರಾಮದ ಕಡೆಗೆ ಬರುತ್ತಿದ್ದ ಕಾರೊಂದು ಮೂಡಲಬೀಡು ಗೇಟಿನಲ್ಲಿ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಸಣ್ಣನಿಂಗನಾಯಕ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಸಣ್ಣನಿಂಗನಾಯಕ ಅವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಈ ಸಂದರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರು ಆಸ್ಪತ್ರೆಗೆ ಧಾವಿಸಿ ಮೃತರ ಅಂತಿಮ ದರ್ಶನವನ್ನು ಪಡೆದು ಕಂಬನಿ ಮಿಡಿದರು.

ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಯಿತು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಅಂತ್ಯಕ್ರಿಯೆ ಪಟ್ಟಣದ ರಾಂಪುರ ಬಡಾವಣೆಯಲ್ಲಿ ಭಾನುವಾರ ನಡೆಯಿತು. ಮೃತರು ಪತ್ನಿ ಶಕುಂತಲ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Tags:
error: Content is protected !!