accident case Two dead
ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಾಸನದ ಲಕ್ಷ್ಮೀಪುರಂ ಬಡಾವಣೆಯ ಕಲೀಮ್ ರೆಹಮಾನ್ (೬೫) ಮತ್ತು ಶೇಕ್ ಅಬ್ದುಲ್ ಖಾದರ್ (೪೫) ಸ್ಥಳದಲ್ಲಿಯೇ ಮೃತಪಟ್ಟವರು.
ಹಾಸನ ಕಡೆಯಿಂದ ಚುಂಚನಕಟ್ಟೆಗೆ ತೆರಳುವ ರಸ್ತೆಯಲ್ಲಿ ಪೈಪ್ಲೈನ್ಗಾಗಿ ಗುಂಡಿ ತೆಗೆಯಲಾಗಿದ್ದು ಅದನ್ನು ಸೂಕ್ತವಾಗಿ ಮುಚ್ಚದ ಕಾರಣ ಆ ಗುಂಡಿಯಲ್ಲಿ ಇಳಿದ ಕಾರು (ಕೆಎ೧೩ ಪಿ ೦೭೬೦) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಶೇಕ್ ಮುನೀರ್ ಅಹ್ಮದ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಾಲಿಗ್ರಾಮ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿ, ರಸ್ತೆಯಲ್ಲಿ ಗುಂಡಿ ತೆಗೆದು ಅಪಘಾತವಾಗಲು ಕಾರಣವಾದವರ ಮೇಲೆ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…