ಮೈಸೂರು

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ವಂಚಕರ ತಂಡವನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನಗರದ ಗೌಸಿಯಾನಗರ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ರುಮಾನ್ ಷರೀಪ್, ರಾಜೀವ್‌ನಗರ ನಿವಾಸಿ ಹಾಗೂ ಕಾರಿನ ಡೀಲರ್ ಮುಜಾಹಿದ್ ಪಾಷ ಹಾಗೂ ಲಷ್ಕರ್ ಮೊಹಲ್ಲಾ ನಿವಾಸಿ ಹಾಗೂ ಕಾರ್ ಮ್ಯಾಕಾನಿಕ್ ಷಾಹಬುದ್ದೀನ್ ಬಂಧಿತರು. ಬಂಧಿತರಿಂದ 1,10 ಕೋಟಿ ರೂ.ಮೌಲ್ಯದ 8 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು, “ಕಡಿಮೆ ಬೆಲೆಗೆ ಉತ್ತಮ ಕಾರುಗಳು ದೊರೆಯುತ್ತವೆ” ಎಂದು ನಂಬಿಸುತ್ತಿದ್ದರು. ನಂತರ ಮುಜಾಹಿದ್ ಪಾಷಾ ಮತ್ತು ಷಾಹಬುದ್ದೀನ್ ಜೊತೆ ಸೇರಿ, ಖರೀದಿದಾರರಿಗೆ ಪೋಲೊ ಮತ್ತು ಆಡಿ ಕಂಪನಿಯ ಕಾರುಗಳನ್ನು ನೀಡಿ ಹಣ ಪಡೆಯುತ್ತಿದ್ದರು. ಆದರೆ ಕಾರಿಗೆ ಸಂಬಂಧಿಸಿದ ಆರ್‌ಸಿ, ಇನ್ಸೂರನ್ಸ್ ಅಥವಾ ಯಾವುದೇ ದಾಖಲೆಗಳನ್ನು ನೀಡುತ್ತಿರಲಿಲ್ಲ.

ಪ್ರಕರಣವೊಂದರಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾದ ಬಳಿಕ, ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಬೆಂಗಳೂರು ಮತ್ತು ಅನ್ಯ ರಾಜ್ಯಗಳಿಂದ ಕಾರುಗಳನ್ನು ತಂದು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಹಲವು ಮಂದಿ ವಂಚನೆಗೆ ಒಳಗಾಗಿದ್ದಾರೆ ಪೊಲೀಸರು ಶಂಕಿಸಿದ್ದಾರೆ.

ಅಪರ ಪೊಲೀಸ್ ಅಧಿಕ್ಷಕ ಎಲ್.ನಾಗೇಶ್ ನೇತೃತ್ವದಲ್ಲಿ ಡಿಎಸ್‌ಪಿ ಜಿ.ಎಸ್.ರಘು, ಬನ್ನೂರು ಪೊಲೀಸ್ ಠಾಣೆಯ ಪಿಐ.ಸತೀಶ್, ಪಿಎಸ್‌ಐ.ಸುದರ್ಶನ್, ಎಎಸ್‌ಐ.ಸತೀಶ್ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

8 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

26 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

33 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

2 hours ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago