ಮೈಸೂರು

ಬಿಜೆಪಿಯವರು ತಪ್ಪು ಮಾಡಿದ್ದರೇ ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛವಾಗಲು ಅನುವು ಮಾಡಿಕೊಡಿ: ಪ್ರತಾಪ್ ಸಿಂಹ

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ.

ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ. ಘೋಷಣೆ ಮಾಡುವಾಗ ನೀವು ಯಾವ ಷರತ್ತು ಹಾಕಿರಲಿಲ್ಲ. ಈಗಲೂ ಯಾವ ಷರತ್ತು ಇಲ್ಲದೇ ಗ್ಯಾರಂಟಿ ಜಾರಿ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

9 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

9 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

10 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

10 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

10 hours ago