ಮೈಸೂರು

ಬಿಜೆಪಿಯವರು ತಪ್ಪು ಮಾಡಿದ್ದರೇ ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛವಾಗಲು ಅನುವು ಮಾಡಿಕೊಡಿ: ಪ್ರತಾಪ್ ಸಿಂಹ

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ.

ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ. ಘೋಷಣೆ ಮಾಡುವಾಗ ನೀವು ಯಾವ ಷರತ್ತು ಹಾಕಿರಲಿಲ್ಲ. ಈಗಲೂ ಯಾವ ಷರತ್ತು ಇಲ್ಲದೇ ಗ್ಯಾರಂಟಿ ಜಾರಿ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago