ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ.
ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ. ಘೋಷಣೆ ಮಾಡುವಾಗ ನೀವು ಯಾವ ಷರತ್ತು ಹಾಕಿರಲಿಲ್ಲ. ಈಗಲೂ ಯಾವ ಷರತ್ತು ಇಲ್ಲದೇ ಗ್ಯಾರಂಟಿ ಜಾರಿ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…