ಮೈಸೂರು

ಮೈಸೂರು: ಖಾಸಗಿ ಲಾಡ್ಜ್‌ನಲ್ಲಿ ವೇಶ್ಯವಾಟಿಕೆ: ಇಬ್ಬರು ಯುವತಿಯರ ರಕ್ಷಣೆ

ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ.

ವಿಜಯನಗರದ ಟ್ಯಾಂಕ್‌ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಯುವಕರನ್ನು ವಶಕಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯ ರಾಜು ಎಂಬುವವರು ಈ ಹೋಟೆಲ್‌ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ವೇಶ್ಯವಾಟಿಕೆ ನಡೆಯುತ್ತಿರುವ ಸಂಬಂಧ ಖಚಿತ ಮಾಹಿತಿ ಮೇರೆಗೆ ಹೋಟೆಲ್‌ ಮೇಲೆ ದಾಳಿ ಮಾಡಿದ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಕ್ಷಿಸಲಾದ ಯುವತಿಯರ ಪೈಕಿ ಒಬ್ಬಾಕೆ ಜಾರ್ಖಂಡ್‌ ಮೂಲದವರಾದರೇ, ಮತ್ತೊಬ್ಬರು ಹುಣಸೂರಿನವರು ಎಂದು ಹೇಳಲಾಗಿದೆ.

ವೇಶ್ಯವಾಟಿಕೆ ಸಂಬಂಧ ಆರು ತಿಂಗಳ ಹಿಂದೆ ಇದೇ ಹೋಟೆಲ್‌ ಮೇಲೆ ದಾಳಿ ಮಾಡಿದ್ದ ಪೊಲೀಸರು ಖಡಕ್‌ ವಾರ್ನಿಂಗ್‌ ನೀಡಿದ್ದರು. ಹಾಗಿದ್ದರೂ ಅವರು ಈ ದಂಧೆಯನ್ನು ಮುಂದುವರೆಸಿದ್ದು,

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

9 mins ago

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…

39 mins ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

1 hour ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

1 hour ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

2 hours ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

2 hours ago