ಮೈಸೂರು

ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗೆ 50 ರ ಸಂಭ್ರಮ

ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು

ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ  ಕಾರ್ಯಕ್ರಮ  ಮೆರುಗು ಹೆಚ್ಚಿಸಿತು.

50 ರ ಸಂಭ್ರಮದ  ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್‌ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗುತ್ತದೆ. ಅಂತಹ ಅತ್ಯುತ್ತಮ ಶಿಕ್ಷಕರ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದೆ ಎಂದು ಪ್ರಶಂಶಿಸಿದರು.

ಪ್ರಾಥಮಿಕ, ಪ್ರೌಢ ಶಿಕ್ಷಣ ನೀಡುವ ಶಿಕ್ಷಕರು ಎಂದಿಗೂ ವಿಭಿನ್ನವಾಗಿ ನಿಲ್ಲುತ್ತಾರೆ. ಅವರು ಮಕ್ಕಳಿಗೆ ಪಠ್ಯಪುಸ್ತಕದಲ್ಲಿರುವ ವಿಷಯವನ್ನು ಕಲಿಸುವುದಕಷ್ಟೇ ಸೀಮಿತವಾಗಿರದೆ ಅವರ ಭವಿಷ್ಯಕ್ಕೆ ಬೇಕಾದ ಪಠ್ಯೇತರ ಶಿಕ್ಷಣವನ್ನು ನಿಸ್ವಾರ್ಥತೆಯಿಂದ ಕಲಿಸುತ್ತಾರೆ ಎಂದರು.

ಇದೇ ವೇಳೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಮೈಸೂರು ಬಿಷಫ್ ಡಾ.ಕೆ.ಅಂತೋಣಿ ವಿಲಿಯಂ, ಮುಕ್ತ ವಿವಿ ಪ್ರಭಾರ ಕುಲಪತಿ ಡಾ.ಎ.ಖಾದರ್ ಪಾಷ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಎಸ್.ಗಿರಿಧರ್ ರಾವ್, ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಎ.ಪಿ.ಜ್ಞಾನಪ್ರಕಾಶ್, ಕೆಎಸ್‌ಒಯು ಪರೀಕ್ಷಾಂಗ ಕುಲಸಚಿವ ಡಾ.ಕೆ.ಬಿ.ಪ್ರವೀಣ್, ಮೈಸೂರು ವಿವಿ ಸಿಡಿಸಿ ನಿರ್ದೇಶಕ ಡಾ.ಎನ್.ಕೆ.ಲೋಕನಾಥ್, ಸೇಂಟ್ ಜೋಸೆಫ್ ಸಂಸ್ಥೆಯ ಡಾ.ಥಾಮಸ್ ಆಂಟನಿ ವಾಳಪಿಳೈ, ಆಲ್ ಫ್ರೆಡ್ ಜಾನ್ ಮೆಂಡೊಂಕ, ಡೊಮಿನಿಕ್ ವಾಜ್, ಪ್ರಾಂಶುಪಾಲರಾದ ಡಾ.ಪ್ರಿಯಾ ಮ್ಯಾಥ್ಯೂ, ಸಂಸ್ಥೆ ಕಾರ್ಯದರ್ಶಿ ಫಾ.ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಕಳೆದ 50 ವರ್ಷಗಳಲ್ಲಿ ಹಲವು ಸಾಧಕರನ್ನು ದೇಶಕ್ಕೆ ಕೊಡುಗೆ ನೀಡಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿದ್ದಾರೆ. ಈ ಮೂಲಕ ಸಂಸ್ಥೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.

 

-ಪ್ರೊ.ಜಿ.ಹೇಮಂತ್ ಕುವಾರ್, ಮೈಸೂರು ವಿ.ವಿ.ಕುಲಪತಿ

andolana

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago