ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು
ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮೆರುಗು ಹೆಚ್ಚಿಸಿತು.
50 ರ ಸಂಭ್ರಮದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗುತ್ತದೆ. ಅಂತಹ ಅತ್ಯುತ್ತಮ ಶಿಕ್ಷಕರ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದೆ ಎಂದು ಪ್ರಶಂಶಿಸಿದರು.
ಪ್ರಾಥಮಿಕ, ಪ್ರೌಢ ಶಿಕ್ಷಣ ನೀಡುವ ಶಿಕ್ಷಕರು ಎಂದಿಗೂ ವಿಭಿನ್ನವಾಗಿ ನಿಲ್ಲುತ್ತಾರೆ. ಅವರು ಮಕ್ಕಳಿಗೆ ಪಠ್ಯಪುಸ್ತಕದಲ್ಲಿರುವ ವಿಷಯವನ್ನು ಕಲಿಸುವುದಕಷ್ಟೇ ಸೀಮಿತವಾಗಿರದೆ ಅವರ ಭವಿಷ್ಯಕ್ಕೆ ಬೇಕಾದ ಪಠ್ಯೇತರ ಶಿಕ್ಷಣವನ್ನು ನಿಸ್ವಾರ್ಥತೆಯಿಂದ ಕಲಿಸುತ್ತಾರೆ ಎಂದರು.
ಇದೇ ವೇಳೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಮೈಸೂರು ಬಿಷಫ್ ಡಾ.ಕೆ.ಅಂತೋಣಿ ವಿಲಿಯಂ, ಮುಕ್ತ ವಿವಿ ಪ್ರಭಾರ ಕುಲಪತಿ ಡಾ.ಎ.ಖಾದರ್ ಪಾಷ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಎಸ್.ಗಿರಿಧರ್ ರಾವ್, ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಎ.ಪಿ.ಜ್ಞಾನಪ್ರಕಾಶ್, ಕೆಎಸ್ಒಯು ಪರೀಕ್ಷಾಂಗ ಕುಲಸಚಿವ ಡಾ.ಕೆ.ಬಿ.ಪ್ರವೀಣ್, ಮೈಸೂರು ವಿವಿ ಸಿಡಿಸಿ ನಿರ್ದೇಶಕ ಡಾ.ಎನ್.ಕೆ.ಲೋಕನಾಥ್, ಸೇಂಟ್ ಜೋಸೆಫ್ ಸಂಸ್ಥೆಯ ಡಾ.ಥಾಮಸ್ ಆಂಟನಿ ವಾಳಪಿಳೈ, ಆಲ್ ಫ್ರೆಡ್ ಜಾನ್ ಮೆಂಡೊಂಕ, ಡೊಮಿನಿಕ್ ವಾಜ್, ಪ್ರಾಂಶುಪಾಲರಾದ ಡಾ.ಪ್ರಿಯಾ ಮ್ಯಾಥ್ಯೂ, ಸಂಸ್ಥೆ ಕಾರ್ಯದರ್ಶಿ ಫಾ.ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಕಳೆದ 50 ವರ್ಷಗಳಲ್ಲಿ ಹಲವು ಸಾಧಕರನ್ನು ದೇಶಕ್ಕೆ ಕೊಡುಗೆ ನೀಡಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿದ್ದಾರೆ. ಈ ಮೂಲಕ ಸಂಸ್ಥೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
-ಪ್ರೊ.ಜಿ.ಹೇಮಂತ್ ಕುವಾರ್, ಮೈಸೂರು ವಿ.ವಿ.ಕುಲಪತಿ
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…