ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು
ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮೆರುಗು ಹೆಚ್ಚಿಸಿತು.
50 ರ ಸಂಭ್ರಮದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗುತ್ತದೆ. ಅಂತಹ ಅತ್ಯುತ್ತಮ ಶಿಕ್ಷಕರ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದೆ ಎಂದು ಪ್ರಶಂಶಿಸಿದರು.
ಪ್ರಾಥಮಿಕ, ಪ್ರೌಢ ಶಿಕ್ಷಣ ನೀಡುವ ಶಿಕ್ಷಕರು ಎಂದಿಗೂ ವಿಭಿನ್ನವಾಗಿ ನಿಲ್ಲುತ್ತಾರೆ. ಅವರು ಮಕ್ಕಳಿಗೆ ಪಠ್ಯಪುಸ್ತಕದಲ್ಲಿರುವ ವಿಷಯವನ್ನು ಕಲಿಸುವುದಕಷ್ಟೇ ಸೀಮಿತವಾಗಿರದೆ ಅವರ ಭವಿಷ್ಯಕ್ಕೆ ಬೇಕಾದ ಪಠ್ಯೇತರ ಶಿಕ್ಷಣವನ್ನು ನಿಸ್ವಾರ್ಥತೆಯಿಂದ ಕಲಿಸುತ್ತಾರೆ ಎಂದರು.
ಇದೇ ವೇಳೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಮೈಸೂರು ಬಿಷಫ್ ಡಾ.ಕೆ.ಅಂತೋಣಿ ವಿಲಿಯಂ, ಮುಕ್ತ ವಿವಿ ಪ್ರಭಾರ ಕುಲಪತಿ ಡಾ.ಎ.ಖಾದರ್ ಪಾಷ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಎಸ್.ಗಿರಿಧರ್ ರಾವ್, ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಎ.ಪಿ.ಜ್ಞಾನಪ್ರಕಾಶ್, ಕೆಎಸ್ಒಯು ಪರೀಕ್ಷಾಂಗ ಕುಲಸಚಿವ ಡಾ.ಕೆ.ಬಿ.ಪ್ರವೀಣ್, ಮೈಸೂರು ವಿವಿ ಸಿಡಿಸಿ ನಿರ್ದೇಶಕ ಡಾ.ಎನ್.ಕೆ.ಲೋಕನಾಥ್, ಸೇಂಟ್ ಜೋಸೆಫ್ ಸಂಸ್ಥೆಯ ಡಾ.ಥಾಮಸ್ ಆಂಟನಿ ವಾಳಪಿಳೈ, ಆಲ್ ಫ್ರೆಡ್ ಜಾನ್ ಮೆಂಡೊಂಕ, ಡೊಮಿನಿಕ್ ವಾಜ್, ಪ್ರಾಂಶುಪಾಲರಾದ ಡಾ.ಪ್ರಿಯಾ ಮ್ಯಾಥ್ಯೂ, ಸಂಸ್ಥೆ ಕಾರ್ಯದರ್ಶಿ ಫಾ.ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಕಳೆದ 50 ವರ್ಷಗಳಲ್ಲಿ ಹಲವು ಸಾಧಕರನ್ನು ದೇಶಕ್ಕೆ ಕೊಡುಗೆ ನೀಡಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿದ್ದಾರೆ. ಈ ಮೂಲಕ ಸಂಸ್ಥೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
-ಪ್ರೊ.ಜಿ.ಹೇಮಂತ್ ಕುವಾರ್, ಮೈಸೂರು ವಿ.ವಿ.ಕುಲಪತಿ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…