ಮೈಸೂರು: ಇಂದು 76ನೇ ಗಣರಾಜ್ಯೋತ್ಸವ ಆಚರಣೆ ಹಿನ್ನಲೆ ದೇಶ ಹಾಗೂ ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮೈದಾನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಮೈಸೂರಿನ ಪಂಜಿನ ಕಾಯಯತು ಮೈದಾನದಲ್ಲಿ ಸಚಿವ ಮಹದೇವಪ್ಪ ಧ್ವಜರೋಹಣ ಮಾಡಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ರಾಜ್ಯದೆಲ್ಲೆಡೆ ಆಯಾ ಜಿಲ್ಲಾ ಸಚಿವರ ನೇತೃತ್ವದಲ್ಲಿ ಧ್ವಜಾರೋಹಣ ಮಾಡಲಾಯಿತು. ಬಳಿಕ ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿದ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಕಾವೇರಿ ನಿಗಮ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಮೈಸೂರಿನ ಗೋಕುಲಂನಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು. ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಮಹೇಶ್, ಮುಖ್ಯ ಇಂಜಿನಿಯರ್ ಆರ್.ಎಲ್.ವೆಂಕಟೇಶ್,ಕಾರ್ಯಪಾಲಕ ಅಭಿಯಂತರ ಭಾಸ್ಕರ್ ಮತ್ತಿತರ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…