ಮೈಸೂರು: ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ವಿಧಾನಪರಿಷತ್ ನೂತನ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ( ಜೂನ್ 23 ) ಮೈಸೂರಿನ ಆಲನಹಳ್ಳಿಯಲ್ಲಿರುವ ಕುದೇರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಿರಂತರ ಹೋರಾಟ ಮಾಡುತ್ತಿದ್ದಾರೆ, ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ. ಚುನಾವಣೆ ಸಮಯದಲ್ಲಿ ತೈಲ ಬೆಲೆಯನ್ನು ಕಡಿಮೆ ಮಾಡಿದ್ದರು. ಈಗ ಮತ್ತೆ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದ್ದಾರೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವದ ಜೊತೆ ಆಟವಾಡುತ್ತಿದೆ. ಬಡವರು ಹಾಗೂ ರೈತರನ್ನು ತೀರ ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು ಚನ್ನಪಟ್ಟಣ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರುಗಳೆಲ್ಲಾ ಕುಳಿತು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…