ಮೈಸೂರು: ಕುಡಿಯುವ ನೀರಿನ ಟ್ಯಾಂಕ್, ಬೋರ್ವೆಲ್ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ವರುಣ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು.
ಅವರು ಇಂದು (ಮೇ.೨೬) ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸುವ ಬಗ್ಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಮಾತನಾಡಿದರು.
ಮನೆಗಳಿಗೆ ನೀರು ಬಿಡುವ ಮುನ್ನ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ಮನೆಗಳಿಗೆ ನೀರು ಬಿಡುವಂತೆ ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು.
ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಣ್ಣ ಮಕ್ಕಳು, ಬಾಣಂತಿಯರು, ಗರ್ಭಿಣಿಯರು ಹಾಗೂ ವಯಸ್ಸಾದವರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದರು.
ಸಭೆಗೆ ಮುನ್ನ ವರುಣ ಗ್ರಾಮದ ಕುಡಿಯುವ ನೀರಿನ ಸ್ಥಾವರಗಳು ಹಾಗೂ ನೀರಿನ ಪೈಪ್ಗಳ ಸ್ವಚ್ಚತೆ ಬಗ್ಗೆ ಪರಿಶೀಲಿಸಿದರು. ವರುಣ ಗ್ರಾಮದ ಸುತ್ತೂರು ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಕುಡಿಯುವ ನೀರಿನ ಸ್ಥಾವರಗಳ ಕೇಸಿಂಗ್ ಎತ್ತರಿಸಲು ತಿಳಿಸಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…