ಮೈಸೂರು: ಕುಡಿಯುವ ನೀರಿನ ಟ್ಯಾಂಕ್, ಬೋರ್ವೆಲ್ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ವರುಣ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು.
ಅವರು ಇಂದು (ಮೇ.೨೬) ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸುವ ಬಗ್ಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಮಾತನಾಡಿದರು.
ಮನೆಗಳಿಗೆ ನೀರು ಬಿಡುವ ಮುನ್ನ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ಮನೆಗಳಿಗೆ ನೀರು ಬಿಡುವಂತೆ ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು.
ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಣ್ಣ ಮಕ್ಕಳು, ಬಾಣಂತಿಯರು, ಗರ್ಭಿಣಿಯರು ಹಾಗೂ ವಯಸ್ಸಾದವರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದರು.
ಸಭೆಗೆ ಮುನ್ನ ವರುಣ ಗ್ರಾಮದ ಕುಡಿಯುವ ನೀರಿನ ಸ್ಥಾವರಗಳು ಹಾಗೂ ನೀರಿನ ಪೈಪ್ಗಳ ಸ್ವಚ್ಚತೆ ಬಗ್ಗೆ ಪರಿಶೀಲಿಸಿದರು. ವರುಣ ಗ್ರಾಮದ ಸುತ್ತೂರು ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಕುಡಿಯುವ ನೀರಿನ ಸ್ಥಾವರಗಳ ಕೇಸಿಂಗ್ ಎತ್ತರಿಸಲು ತಿಳಿಸಿದರು.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…