CEO Yukesh
ಮೈಸೂರು : ಜಲ ಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಂಜನಗೂಡು ತಾಲ್ಲೂಕಿನ ತಾಂಡವಪುರ, ಸುತ್ತೂರು ,ಹದಿನಾರು ಗ್ರಾಮ ಪಂಚಾಯಿತಿ ಹಾಗೂ ತಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮ ಹಾಗೂ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂಜನಗೂಡು ತಾಲೂಕು ತಾಂಡವಪುರ ಮತ್ತು ಇತರೆ 31 ಜನವಸತಿಗಳಿಗೆ DBOT ಆಧಾರಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು. ಹಾಗೂ ಗರ್ಭಿಣಿಯರಿಗೆ ನಿಗಧಿತ ಸಮಯದಲ್ಲಿ ಆಹಾರವನ್ನು ಪೂರೈಸಲು ಸೂಚಿಸಿದರು.
ಜೆ.ಜೆ.ಎಂ. ಯೋಜನೆಯ ಅರ್ಥ್ ವರ್ಕಿಂಗ್ ಪರಿಶೀಲಿಸಿದರು. ಬಳಿಕ ಕೆಲ ಮನೆಗಳಿಗೆ ತೆರಳಿ ಜೆಜೆಎಂ ಯೋಜನೆಯಲ್ಲಿ ಅಳವಡಿಸಲಾಗಿರುವ ನಲ್ಲಿಯಲ್ಲಿ ಬರುವ ನೀರಿನ ತೀವ್ರತೆಯನ್ನು ಪರಿಶೀಲಿಸಿದರು. ಹಾಗೂ ಗ್ರಾಮಗಳಲ್ಲಿ ನೀರಿನ ಟ್ಯಾಂಕ್ ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು. ಟ್ಯಾಂಕ್ ಗಳನ್ನು ಸ್ವಚ್ಚ ಮಾಡಿದ ದಿನಾಂಕವನ್ನು ಕಡ್ಡಾಯವಾಗಿ ಗೋಡೆ ಮೇಲೆ ಬರೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯ ಪಾಲಕ ಅಭಿಯಂತರರಾದ ರಂಜಿತ್ ಕುಮಾರ್, ಸಹಾಯಕ ಕಾರ್ಯ ಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…