CEO Yukesh
ಮೈಸೂರು : ಜಲ ಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಂಜನಗೂಡು ತಾಲ್ಲೂಕಿನ ತಾಂಡವಪುರ, ಸುತ್ತೂರು ,ಹದಿನಾರು ಗ್ರಾಮ ಪಂಚಾಯಿತಿ ಹಾಗೂ ತಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮ ಹಾಗೂ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂಜನಗೂಡು ತಾಲೂಕು ತಾಂಡವಪುರ ಮತ್ತು ಇತರೆ 31 ಜನವಸತಿಗಳಿಗೆ DBOT ಆಧಾರಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು. ಹಾಗೂ ಗರ್ಭಿಣಿಯರಿಗೆ ನಿಗಧಿತ ಸಮಯದಲ್ಲಿ ಆಹಾರವನ್ನು ಪೂರೈಸಲು ಸೂಚಿಸಿದರು.
ಜೆ.ಜೆ.ಎಂ. ಯೋಜನೆಯ ಅರ್ಥ್ ವರ್ಕಿಂಗ್ ಪರಿಶೀಲಿಸಿದರು. ಬಳಿಕ ಕೆಲ ಮನೆಗಳಿಗೆ ತೆರಳಿ ಜೆಜೆಎಂ ಯೋಜನೆಯಲ್ಲಿ ಅಳವಡಿಸಲಾಗಿರುವ ನಲ್ಲಿಯಲ್ಲಿ ಬರುವ ನೀರಿನ ತೀವ್ರತೆಯನ್ನು ಪರಿಶೀಲಿಸಿದರು. ಹಾಗೂ ಗ್ರಾಮಗಳಲ್ಲಿ ನೀರಿನ ಟ್ಯಾಂಕ್ ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು. ಟ್ಯಾಂಕ್ ಗಳನ್ನು ಸ್ವಚ್ಚ ಮಾಡಿದ ದಿನಾಂಕವನ್ನು ಕಡ್ಡಾಯವಾಗಿ ಗೋಡೆ ಮೇಲೆ ಬರೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯ ಪಾಲಕ ಅಭಿಯಂತರರಾದ ರಂಜಿತ್ ಕುಮಾರ್, ಸಹಾಯಕ ಕಾರ್ಯ ಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…