ಮೈಸೂರು

ಮೈಸೂರು | ಜೆ.ಜೆ.ಎಂ. ಕಾಮಗಾರಿ ಪರಿಶೀಲಿಸಿದ ಸಿಇಓ ಯುಕೇಶ್

ಮೈಸೂರು : ಜಲ ಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ನಂಜನಗೂಡು ತಾಲ್ಲೂಕಿನ ತಾಂಡವಪುರ, ಸುತ್ತೂರು ,ಹದಿನಾರು ಗ್ರಾಮ ಪಂಚಾಯಿತಿ ಹಾಗೂ ತಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮ ಹಾಗೂ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂಜನಗೂಡು ತಾಲೂಕು ತಾಂಡವಪುರ ಮತ್ತು ಇತರೆ 31 ಜನವಸತಿಗಳಿಗೆ DBOT ಆಧಾರಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು. ಹಾಗೂ ಗರ್ಭಿಣಿಯರಿಗೆ ನಿಗಧಿತ ಸಮಯದಲ್ಲಿ ಆಹಾರವನ್ನು ಪೂರೈಸಲು ಸೂಚಿಸಿದರು.

ಜೆ.ಜೆ.ಎಂ. ಯೋಜನೆಯ ಅರ್ಥ್ ವರ್ಕಿಂಗ್ ಪರಿಶೀಲಿಸಿದರು. ಬಳಿಕ ಕೆಲ ಮನೆಗಳಿಗೆ ತೆರಳಿ ಜೆಜೆಎಂ ಯೋಜನೆಯಲ್ಲಿ ಅಳವಡಿಸಲಾಗಿರುವ ನಲ್ಲಿಯಲ್ಲಿ ಬರುವ ನೀರಿನ ತೀವ್ರತೆಯನ್ನು ಪರಿಶೀಲಿಸಿದರು. ಹಾಗೂ ಗ್ರಾಮಗಳಲ್ಲಿ ನೀರಿನ ಟ್ಯಾಂಕ್ ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು. ಟ್ಯಾಂಕ್ ಗಳನ್ನು ಸ್ವಚ್ಚ ಮಾಡಿದ ದಿನಾಂಕವನ್ನು ಕಡ್ಡಾಯವಾಗಿ ಗೋಡೆ ಮೇಲೆ ಬರೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯ ಪಾಲಕ ಅಭಿಯಂತರರಾದ ರಂಜಿತ್ ಕುಮಾರ್, ಸಹಾಯಕ ಕಾರ್ಯ ಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

9 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago