ಮೈಸೂರು

ಸೆಸ್ಕ್: ವಿದ್ಯುತ್ ಅಪಘಾತಗಳ ಪ್ರಮಾಣ ಶೇ.70ರಷ್ಟು ಕುಸಿತ

ಮೈಸೂರು:

ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 ವಿದ್ಯುತ್ ಅಪಘಾತಗಳು ಸಂಭವಿಸಿತ್ತು. 2023-24ರಲ್ಲಿ 138 ವಿದ್ಯುತ್ ಅಪಘಾತಗಳು ಮಾತ್ರ ಸಂಭವಿಸಿದ್ದು, ಒಟ್ಟಾರೆ ಅಪಘಾತಗಳ ಪ್ರಮಾಣದಲ್ಲಿ ಶೇ.35%ರಷ್ಟು ಕಡಿಮೆಯಾಗಿದೆ. ಪ್ರಾಣಾಪಾಯದ ಪ್ರಮಾಣ ಶೇ.70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ.40ರಷ್ಟು ಕ್ಷೀಣೀಸಿದೆ,” ಎಂದರು.

“ವಿದ್ಯುತ್ ಸುರಕ್ಷತೆ ವಿಚಾರದಲ್ಲಿ ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂಬುದನ್ನು ನೆನಪಿಸಲು ಸುರಕ್ಷತಾ ಸಪ್ತಾಹ ಅತ್ಯಂತ ಮುಖ್ಯವಾಗಿದೆ. ಗ್ರಾಹಕರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಸುವ ಜತೆಗೆ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು. ಕಾರ್ಯ ನಿರ್ವಹಣೆ ವೇಳೆ ಸುರಕ್ಷತಾ ನಿಯಮ ಉಲ್ಲಂಘಿಸಿದ ಸಿಬ್ಬಂದಿಗೆ ದಂಡ ವಿಧಿಸುವ ಸಂಬoಧ ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಿಬ್ಬಂದಿಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಅವರು ತಿಳಿಸಿದರು.

ವಿದ್ಯುತ್ ಅವಘಡಗಳಿಗೆ ಪ್ರಮುಖ ಕಾರಣಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಜತೆಗೆ ನಾಟಕ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಪರ ಮುಖ್ಯ ಪರಿವೀಕ್ಷಕರಾದ ಎಚ್.ಎಸ್. ವೆಂಕಟೇಶ್, ಅಧೀಕ್ಷಕ ಅಭಿಯಂತರರಾದ ಸುನೀಲ್, ಉಪ ಮುಖ್ಯ ಪರಿವೀಕ್ಷಕರಾದ ಅಲ್ತಾಫ್ ಹುಸೇನ್, ಸಂದೀಪ್, ರಘುಕುಮಾರ್ ಸೇರಿದಂತೆ ವಿದ್ಯುತ್ ಪರಿವೀಕ್ಷಕ ವಲಯದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಜೆಪಿ- ಕಾಂಗ್ರೆಸ್ ನಡುವೆ ಏಕಿಷ್ಟು ದ್ವೇಷ?

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…

28 mins ago

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…

42 mins ago

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

1 hour ago

ಮೈಸೂರು ಮೈಸೂರಾಗಿಯೇ ಇರಲು ಏನು ಮಾಡಬೇಕು? ಏನು ಮಾಡಬಾರದು?

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ…

2 hours ago

ಜಾಗತಿಕ ಕಾಮಜಾಲಗಳ ಮಾರ್ಜಾಲ ಜೆಫ್ರಿ ಎಫ್‌ಸ್ಟೀನ್‌

• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು…

2 hours ago

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…

3 hours ago