ಮೈಸೂರು:
ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 ವಿದ್ಯುತ್ ಅಪಘಾತಗಳು ಸಂಭವಿಸಿತ್ತು. 2023-24ರಲ್ಲಿ 138 ವಿದ್ಯುತ್ ಅಪಘಾತಗಳು ಮಾತ್ರ ಸಂಭವಿಸಿದ್ದು, ಒಟ್ಟಾರೆ ಅಪಘಾತಗಳ ಪ್ರಮಾಣದಲ್ಲಿ ಶೇ.35%ರಷ್ಟು ಕಡಿಮೆಯಾಗಿದೆ. ಪ್ರಾಣಾಪಾಯದ ಪ್ರಮಾಣ ಶೇ.70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ.40ರಷ್ಟು ಕ್ಷೀಣೀಸಿದೆ,” ಎಂದರು.
“ವಿದ್ಯುತ್ ಸುರಕ್ಷತೆ ವಿಚಾರದಲ್ಲಿ ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂಬುದನ್ನು ನೆನಪಿಸಲು ಸುರಕ್ಷತಾ ಸಪ್ತಾಹ ಅತ್ಯಂತ ಮುಖ್ಯವಾಗಿದೆ. ಗ್ರಾಹಕರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಸುವ ಜತೆಗೆ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು. ಕಾರ್ಯ ನಿರ್ವಹಣೆ ವೇಳೆ ಸುರಕ್ಷತಾ ನಿಯಮ ಉಲ್ಲಂಘಿಸಿದ ಸಿಬ್ಬಂದಿಗೆ ದಂಡ ವಿಧಿಸುವ ಸಂಬoಧ ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಿಬ್ಬಂದಿಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಅವರು ತಿಳಿಸಿದರು.
ವಿದ್ಯುತ್ ಅವಘಡಗಳಿಗೆ ಪ್ರಮುಖ ಕಾರಣಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಜತೆಗೆ ನಾಟಕ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಪರ ಮುಖ್ಯ ಪರಿವೀಕ್ಷಕರಾದ ಎಚ್.ಎಸ್. ವೆಂಕಟೇಶ್, ಅಧೀಕ್ಷಕ ಅಭಿಯಂತರರಾದ ಸುನೀಲ್, ಉಪ ಮುಖ್ಯ ಪರಿವೀಕ್ಷಕರಾದ ಅಲ್ತಾಫ್ ಹುಸೇನ್, ಸಂದೀಪ್, ರಘುಕುಮಾರ್ ಸೇರಿದಂತೆ ವಿದ್ಯುತ್ ಪರಿವೀಕ್ಷಕ ವಲಯದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…