ಮೈಸೂರು:
ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 ವಿದ್ಯುತ್ ಅಪಘಾತಗಳು ಸಂಭವಿಸಿತ್ತು. 2023-24ರಲ್ಲಿ 138 ವಿದ್ಯುತ್ ಅಪಘಾತಗಳು ಮಾತ್ರ ಸಂಭವಿಸಿದ್ದು, ಒಟ್ಟಾರೆ ಅಪಘಾತಗಳ ಪ್ರಮಾಣದಲ್ಲಿ ಶೇ.35%ರಷ್ಟು ಕಡಿಮೆಯಾಗಿದೆ. ಪ್ರಾಣಾಪಾಯದ ಪ್ರಮಾಣ ಶೇ.70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ.40ರಷ್ಟು ಕ್ಷೀಣೀಸಿದೆ,” ಎಂದರು.
“ವಿದ್ಯುತ್ ಸುರಕ್ಷತೆ ವಿಚಾರದಲ್ಲಿ ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂಬುದನ್ನು ನೆನಪಿಸಲು ಸುರಕ್ಷತಾ ಸಪ್ತಾಹ ಅತ್ಯಂತ ಮುಖ್ಯವಾಗಿದೆ. ಗ್ರಾಹಕರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಸುವ ಜತೆಗೆ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು. ಕಾರ್ಯ ನಿರ್ವಹಣೆ ವೇಳೆ ಸುರಕ್ಷತಾ ನಿಯಮ ಉಲ್ಲಂಘಿಸಿದ ಸಿಬ್ಬಂದಿಗೆ ದಂಡ ವಿಧಿಸುವ ಸಂಬoಧ ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಿಬ್ಬಂದಿಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಅವರು ತಿಳಿಸಿದರು.
ವಿದ್ಯುತ್ ಅವಘಡಗಳಿಗೆ ಪ್ರಮುಖ ಕಾರಣಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಜತೆಗೆ ನಾಟಕ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಪರ ಮುಖ್ಯ ಪರಿವೀಕ್ಷಕರಾದ ಎಚ್.ಎಸ್. ವೆಂಕಟೇಶ್, ಅಧೀಕ್ಷಕ ಅಭಿಯಂತರರಾದ ಸುನೀಲ್, ಉಪ ಮುಖ್ಯ ಪರಿವೀಕ್ಷಕರಾದ ಅಲ್ತಾಫ್ ಹುಸೇನ್, ಸಂದೀಪ್, ರಘುಕುಮಾರ್ ಸೇರಿದಂತೆ ವಿದ್ಯುತ್ ಪರಿವೀಕ್ಷಕ ವಲಯದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…