ಮೈಸೂರು:
ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 ವಿದ್ಯುತ್ ಅಪಘಾತಗಳು ಸಂಭವಿಸಿತ್ತು. 2023-24ರಲ್ಲಿ 138 ವಿದ್ಯುತ್ ಅಪಘಾತಗಳು ಮಾತ್ರ ಸಂಭವಿಸಿದ್ದು, ಒಟ್ಟಾರೆ ಅಪಘಾತಗಳ ಪ್ರಮಾಣದಲ್ಲಿ ಶೇ.35%ರಷ್ಟು ಕಡಿಮೆಯಾಗಿದೆ. ಪ್ರಾಣಾಪಾಯದ ಪ್ರಮಾಣ ಶೇ.70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ.40ರಷ್ಟು ಕ್ಷೀಣೀಸಿದೆ,” ಎಂದರು.
“ವಿದ್ಯುತ್ ಸುರಕ್ಷತೆ ವಿಚಾರದಲ್ಲಿ ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂಬುದನ್ನು ನೆನಪಿಸಲು ಸುರಕ್ಷತಾ ಸಪ್ತಾಹ ಅತ್ಯಂತ ಮುಖ್ಯವಾಗಿದೆ. ಗ್ರಾಹಕರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಸುವ ಜತೆಗೆ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು. ಕಾರ್ಯ ನಿರ್ವಹಣೆ ವೇಳೆ ಸುರಕ್ಷತಾ ನಿಯಮ ಉಲ್ಲಂಘಿಸಿದ ಸಿಬ್ಬಂದಿಗೆ ದಂಡ ವಿಧಿಸುವ ಸಂಬoಧ ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಿಬ್ಬಂದಿಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಅವರು ತಿಳಿಸಿದರು.
ವಿದ್ಯುತ್ ಅವಘಡಗಳಿಗೆ ಪ್ರಮುಖ ಕಾರಣಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಜತೆಗೆ ನಾಟಕ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಪರ ಮುಖ್ಯ ಪರಿವೀಕ್ಷಕರಾದ ಎಚ್.ಎಸ್. ವೆಂಕಟೇಶ್, ಅಧೀಕ್ಷಕ ಅಭಿಯಂತರರಾದ ಸುನೀಲ್, ಉಪ ಮುಖ್ಯ ಪರಿವೀಕ್ಷಕರಾದ ಅಲ್ತಾಫ್ ಹುಸೇನ್, ಸಂದೀಪ್, ರಘುಕುಮಾರ್ ಸೇರಿದಂತೆ ವಿದ್ಯುತ್ ಪರಿವೀಕ್ಷಕ ವಲಯದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…