ಮೈಸೂರು

ವಿದ್ಯುತ್‌ ದೀಪಾಲಂಕಾರ ಎಂದರೆ ಸೆಸ್ಕ್‌ ಸಿಬ್ಬಂದಿಯ ನೆನೆಯುವರು: ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಹೊಸವರ್ಷದ ಸಂದರ್ಭದಲ್ಲಿ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಸೆಸ್ಕ್‌ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಗುರುತಿಸಬೇಕು, ಈ ನಿಟ್ಟಿನಲ್ಲಿ ಪರಿಶ್ರಮ ಹಾಕೋಣ, ಶಾಶ್ವತವಾಗಿ ಉಳಿಯುವಂಥ ಕೆಲಸಗಳನ್ನು ಮಾಡೋಣ. ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಸ್ಮರಿಸುತ್ತಾರೆ. ನಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವುದು ನಿಶ್ಚಿತ, ಅದಕ್ಕಾಗಿ ಕಾಯುವ ಮನಸ್ಥಿತಿ ಇರಬೇಕು. ಅದಕ್ಕೆ ಉದಾಹರಣೆ ಅಂದರೆ, ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಿದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ,” ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಶೀಲಾ ಮಾತನಾಡಿ, “ಸೆಸ್ಕ್‌ ವತಿಯಿಂದ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಲಾಗಿದೆ. ಸಂಸ್ಥೆಯ ಕೆಲಸವನ್ನು ಹೆಚ್ಚು ಶ್ರದ್ಧೆಯಿಂದ ಮಾಡಿ, ತ್ವರಿತವಾಗಿ ಸೇವೆ ಒದಗಿಸುವ ಗುರಿ ನಿಮ್ಮದಾಗಲಿ. ಹಿಂದಿನ ವರ್ಷದ ಕಹಿ ಘಟನೆಗಳನ್ನು ಮರೆತು, ಸಿಹಿ ಘಟನೆಗಳ ಪ್ರೇರಣೆಯೊಂದಿಗೆ ಮುನ್ನಡೆಯೋಣ,” ಎಂದರು.

ನಿಗಮದ ತಾಂತ್ರಿಕ ವಿಭಾಗದ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, “ಹಿಂದಿನ ವರ್ಷ ಎಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನಮ್ಮ‌ ಜವಾಬ್ದಾರಿಗಳನ್ನು ಅರಿತು, ತಂಡವಾಗಿ ಕೆಲಸ ಮಾಡೋಣ. ಶ್ರೇಯಸ್ಸು ನಮ್ಮದಾಗಲಿದೆ” ಎಂದರು.

ಇದೇ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು, ನಿಗಮದ ವತಿಯಿಂದ ಮಾಡಿರುವ ಕೆಲಸಗಳು ಹಾಗೂ ಮುಂದಿನ ದಿನಗಳಲ್ಲಿ ಮಾಡಬೇಕಿರುವ ಕೆಲಸಗಳ ಬಗ್ಗೆ ಅನಿಸಿಕೆ ಹಂಚಿಕೊಂಡರು. ಸಭೆಯಲ್ಲಿ ಸೆಸ್ಕ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

25 seconds ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

9 mins ago

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…

31 mins ago

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

51 mins ago

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…

1 hour ago

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…

1 hour ago