ಮೈಸೂರು

ವಿದ್ಯುತ್‌ ದೀಪಾಲಂಕಾರ ಎಂದರೆ ಸೆಸ್ಕ್‌ ಸಿಬ್ಬಂದಿಯ ನೆನೆಯುವರು: ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಹೊಸವರ್ಷದ ಸಂದರ್ಭದಲ್ಲಿ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಸೆಸ್ಕ್‌ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಗುರುತಿಸಬೇಕು, ಈ ನಿಟ್ಟಿನಲ್ಲಿ ಪರಿಶ್ರಮ ಹಾಕೋಣ, ಶಾಶ್ವತವಾಗಿ ಉಳಿಯುವಂಥ ಕೆಲಸಗಳನ್ನು ಮಾಡೋಣ. ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಸ್ಮರಿಸುತ್ತಾರೆ. ನಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವುದು ನಿಶ್ಚಿತ, ಅದಕ್ಕಾಗಿ ಕಾಯುವ ಮನಸ್ಥಿತಿ ಇರಬೇಕು. ಅದಕ್ಕೆ ಉದಾಹರಣೆ ಅಂದರೆ, ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಿದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ,” ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಶೀಲಾ ಮಾತನಾಡಿ, “ಸೆಸ್ಕ್‌ ವತಿಯಿಂದ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಲಾಗಿದೆ. ಸಂಸ್ಥೆಯ ಕೆಲಸವನ್ನು ಹೆಚ್ಚು ಶ್ರದ್ಧೆಯಿಂದ ಮಾಡಿ, ತ್ವರಿತವಾಗಿ ಸೇವೆ ಒದಗಿಸುವ ಗುರಿ ನಿಮ್ಮದಾಗಲಿ. ಹಿಂದಿನ ವರ್ಷದ ಕಹಿ ಘಟನೆಗಳನ್ನು ಮರೆತು, ಸಿಹಿ ಘಟನೆಗಳ ಪ್ರೇರಣೆಯೊಂದಿಗೆ ಮುನ್ನಡೆಯೋಣ,” ಎಂದರು.

ನಿಗಮದ ತಾಂತ್ರಿಕ ವಿಭಾಗದ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, “ಹಿಂದಿನ ವರ್ಷ ಎಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನಮ್ಮ‌ ಜವಾಬ್ದಾರಿಗಳನ್ನು ಅರಿತು, ತಂಡವಾಗಿ ಕೆಲಸ ಮಾಡೋಣ. ಶ್ರೇಯಸ್ಸು ನಮ್ಮದಾಗಲಿದೆ” ಎಂದರು.

ಇದೇ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು, ನಿಗಮದ ವತಿಯಿಂದ ಮಾಡಿರುವ ಕೆಲಸಗಳು ಹಾಗೂ ಮುಂದಿನ ದಿನಗಳಲ್ಲಿ ಮಾಡಬೇಕಿರುವ ಕೆಲಸಗಳ ಬಗ್ಗೆ ಅನಿಸಿಕೆ ಹಂಚಿಕೊಂಡರು. ಸಭೆಯಲ್ಲಿ ಸೆಸ್ಕ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

27 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

28 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

31 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

32 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

40 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

47 mins ago