ಮೈಸೂರು

ಹನಿಟ್ರ್ಯಾಪ್‌ ಪ್ರಕರಣ| ರಾಜ್ಯ ಜನತೆಯ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣ ಸ್ವಾಮಿ

ಮೈಸೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರರ ಅವರ ಹೇಳಿಕೆಗಳಿಂದ ರಾಜ್ಯ ಜನತೆಯ ದಾರಿ ತಪ್ಪಿಸುವ ಆಗುತ್ತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೇ ಸದನದಲ್ಲಿ ರಾಜಣ್ಣನ ಮಗ ಪಕ್ಕದಲ್ಲೇ ಕುಳಿತಿದ್ದೆ. ಮೊದಲು ಕಾಂಗ್ರೆಸ್ ನಾಯಕರೇ ಹನಿಟ್ರ್ಯಾಪ್ ಅಂದರು. ಇದೀಗ ಮತ್ತೆ ಅವರೇ ಕೊಲೆ ಸುಫಾರಿ ಎಂದು ಹೇಳುತ್ತಿದ್ದಾರೆ. ಆದರೆ ಇದೆಲ್ಲವೂ ಕಿವಿಗೆ ಹೂ ಇಡುವ ಕೆಲಸ
ಹೈಕಮಾಂಡ್ ಸೂಚನೆ ನೀಡಿರಬೇಕು. ಹಾಗಾಗಿ ಜನರ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಅವರೇ ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆಂದು ಜನರಿಗೆ ಹೇಳಬೇಕು ಎಂದರು.

ಹಗ್ಗ ಹಿಡಿದು ಆಟ ಆಡಿಸುತ್ತಿರೋದು ಯಾರೆಂದು ರಾಜ್ಯದ ಜನತೆಗೆ ಗೊತ್ತಾಗಬೇಕು. ಸಿಡಿ ಫ್ಯಾಕ್ಟರಿ, ಪೆನ್ ಡ್ರೈವ್ ಫ್ಯಾಕ್ಟರಿ ಯಾರದ, ರಮೇಶ್ ಜಾರಕಿಹೊಳಿ ಕೂಡ ಈ ಹಿಂದೆ ಯಾರೋ ಮಹಾನ್ ನಾಯಕರು ಇದ್ದಾರೆಂದು ಹೇಳಿದ್ದರು. ಈಗಲೂ ಆ ಮಹಾನ್ ನಾಯಕರು ಇದ್ದಾರೆಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ
ಈ ಪ್ರಕರಣದಿಂದ ರಾಜ್ಯದ ಘನತೆಯ ಹೆಸರರು ಹಾಗೂ ಮಾನ ಮರ್ಯಾದೆ ಹೋಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

25 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

27 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

29 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago