ಮೈಸೂರು

ಹನಿಟ್ರ್ಯಾಪ್‌ ಪ್ರಕರಣ| ರಾಜ್ಯ ಜನತೆಯ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣ ಸ್ವಾಮಿ

ಮೈಸೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರರ ಅವರ ಹೇಳಿಕೆಗಳಿಂದ ರಾಜ್ಯ ಜನತೆಯ ದಾರಿ ತಪ್ಪಿಸುವ ಆಗುತ್ತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೇ ಸದನದಲ್ಲಿ ರಾಜಣ್ಣನ ಮಗ ಪಕ್ಕದಲ್ಲೇ ಕುಳಿತಿದ್ದೆ. ಮೊದಲು ಕಾಂಗ್ರೆಸ್ ನಾಯಕರೇ ಹನಿಟ್ರ್ಯಾಪ್ ಅಂದರು. ಇದೀಗ ಮತ್ತೆ ಅವರೇ ಕೊಲೆ ಸುಫಾರಿ ಎಂದು ಹೇಳುತ್ತಿದ್ದಾರೆ. ಆದರೆ ಇದೆಲ್ಲವೂ ಕಿವಿಗೆ ಹೂ ಇಡುವ ಕೆಲಸ
ಹೈಕಮಾಂಡ್ ಸೂಚನೆ ನೀಡಿರಬೇಕು. ಹಾಗಾಗಿ ಜನರ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಅವರೇ ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆಂದು ಜನರಿಗೆ ಹೇಳಬೇಕು ಎಂದರು.

ಹಗ್ಗ ಹಿಡಿದು ಆಟ ಆಡಿಸುತ್ತಿರೋದು ಯಾರೆಂದು ರಾಜ್ಯದ ಜನತೆಗೆ ಗೊತ್ತಾಗಬೇಕು. ಸಿಡಿ ಫ್ಯಾಕ್ಟರಿ, ಪೆನ್ ಡ್ರೈವ್ ಫ್ಯಾಕ್ಟರಿ ಯಾರದ, ರಮೇಶ್ ಜಾರಕಿಹೊಳಿ ಕೂಡ ಈ ಹಿಂದೆ ಯಾರೋ ಮಹಾನ್ ನಾಯಕರು ಇದ್ದಾರೆಂದು ಹೇಳಿದ್ದರು. ಈಗಲೂ ಆ ಮಹಾನ್ ನಾಯಕರು ಇದ್ದಾರೆಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ
ಈ ಪ್ರಕರಣದಿಂದ ರಾಜ್ಯದ ಘನತೆಯ ಹೆಸರರು ಹಾಗೂ ಮಾನ ಮರ್ಯಾದೆ ಹೋಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago