ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲವಾದರೇ, ಡಿಕೆಶಿಯನ್ನೇ ಈ ರಾಜ್ಯದ ಸಿಎಂ ಮಾಡಿ ಎಂದು ವಿಧಾನ ಪರಿಷತ್ ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಸವಾಲ್ ಎಸೆದಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.28) ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಬಿಜೆಪಿ ಅವರು ಮಾತನಾಡಿದರೆ ಕಾಂಗ್ರೆಸ್ ಅವರು ಬಟ್ಟೆ ಬಿಚ್ಚಿಕೊಂಡು ಬರುತ್ತಾರೆ. ಅದೇ ಅವರ ಡಿಸಿಎಂ ಡಿ.ಕೆ.ಶಿವಕುಮಾರ್ ಮೊನ್ನೆ ಸಂವಿಧಾನ ಬದಲಾಯಿಸಿ ಮುಸಲ್ಮಾನ ಸಮುದದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದಿದ್ದರು. ಇದರಿಂದ ದೇಶದಲ್ಲಿ ಕಾಂಗ್ರೆಸ್ ಬೆತ್ತಲಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಈ ವಿಚಾರವಾಗಿ ತಕ್ಷಣ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡಲಿಲ್ಲ ಅಂದರೆ ಸಿಎಂ ಸಿದ್ದರಾಮಯ್ಯ ಅವರನ್ನು ಉಚ್ಛಾಟನೆ ಮಾಡಲಿ. ಇನ್ನು ಉಚ್ಛಾಟನೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆ ಎಂದು ನಾನು ಭಾವಿಸಿದ್ದೇನೆ. ಅವರಿಗೆ ಡಿಕೆಶಿಯನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲ ಅಂದರೆ ಡಿ.ಕೆ. ಶಿವಕುಮಾರ್ ಅವರನ್ನೇ ಸಿಎಂ ಮಾಡಿ ನೀವು ಕೆಳಗಡೆ ಇಳಿಯಿರಿ ಎಂದು ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಸವಾಲ್ ಹಾಕಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…