ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲವಾದರೇ, ಡಿಕೆಶಿಯನ್ನೇ ಈ ರಾಜ್ಯದ ಸಿಎಂ ಮಾಡಿ ಎಂದು ವಿಧಾನ ಪರಿಷತ್ ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಸವಾಲ್ ಎಸೆದಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.28) ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಬಿಜೆಪಿ ಅವರು ಮಾತನಾಡಿದರೆ ಕಾಂಗ್ರೆಸ್ ಅವರು ಬಟ್ಟೆ ಬಿಚ್ಚಿಕೊಂಡು ಬರುತ್ತಾರೆ. ಅದೇ ಅವರ ಡಿಸಿಎಂ ಡಿ.ಕೆ.ಶಿವಕುಮಾರ್ ಮೊನ್ನೆ ಸಂವಿಧಾನ ಬದಲಾಯಿಸಿ ಮುಸಲ್ಮಾನ ಸಮುದದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದಿದ್ದರು. ಇದರಿಂದ ದೇಶದಲ್ಲಿ ಕಾಂಗ್ರೆಸ್ ಬೆತ್ತಲಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಈ ವಿಚಾರವಾಗಿ ತಕ್ಷಣ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡಲಿಲ್ಲ ಅಂದರೆ ಸಿಎಂ ಸಿದ್ದರಾಮಯ್ಯ ಅವರನ್ನು ಉಚ್ಛಾಟನೆ ಮಾಡಲಿ. ಇನ್ನು ಉಚ್ಛಾಟನೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆ ಎಂದು ನಾನು ಭಾವಿಸಿದ್ದೇನೆ. ಅವರಿಗೆ ಡಿಕೆಶಿಯನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲ ಅಂದರೆ ಡಿ.ಕೆ. ಶಿವಕುಮಾರ್ ಅವರನ್ನೇ ಸಿಎಂ ಮಾಡಿ ನೀವು ಕೆಳಗಡೆ ಇಳಿಯಿರಿ ಎಂದು ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಸವಾಲ್ ಹಾಕಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…