chamundeshwari chamundi temple special pooja
ಮೈಸೂರು : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಜು.17ರಂದು ನಡೆಯಲಿರುವ ಶ್ರೀ ಚಾಮುಂಡೇಶ್ವರಿ ವರ್ಧಂತಿಗೆ ಚಾಮುಂಡೇಶ್ವರಿ ಪ್ರಾಧಿಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಗುರುವಾರ ಮುಂಜಾನೆ 4 ಗಂಟೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ ಆರಂಭಗೊಳ್ಳಲಿವೆ. ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಗುತ್ತದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ವಿವಿಧೆಡೆ ಪ್ರಸಾದ ವಿನಿಯೋಗ
ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ನಗರದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲು ಜನರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಸಾದ ವಿನಿಯೋಗವೂ ನಡೆಯಲಿದೆ. ನಗರದ ಪ್ರಮುಖ ಬಡಾವಣೆಗಳು, ಬೆಟ್ಟದ ಪಾದ, ಆಟೋ ನಿಲ್ದಾಣಗಳು, ವೃತ್ತಗಳಲ್ಲಿ ಶಾಮಿಯಾನ ಹಾಕಿ ಚಾಮುಂಡೇಶ್ವರಿ ವರ್ಧಂತಿ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ಉಪಾಹಾರ ವಿತರಣೆ ಮಾಡಲಾಗುತ್ತದೆ. ಕೆಲವರು ಕಲ್ಯಾಣ ಮಂಟಪಗಳಲ್ಲಿ ಚಾಮುಂಡೇಶ್ವರಿ ದೇವತೆಗೆ ಪೂಜೆ ಸಲ್ಲಿಸಿ ಅನ್ನಸತಂರ್ಪಣೆ ಮಾಡುತ್ತಾರೆ ಇದಕ್ಕಾಗಿ ಆಮಂತ್ರಣ ಪತ್ರಿಕೆಯನ್ನೂ ಮುದ್ರಿಸಿದ್ದಾರೆ.
ಜು.18ರಂದು ಕಡೇ ಆಷಾಢ ಶುಕ್ರವಾರವಾಗಿದ್ದು, ಅಂದು ಚಾಮುಂಡೇಶ್ವರಿ ದೇವಾಲಯದಲ್ಲಿ ಬೆಳಗಿನ ಜಾವ 3.30ಕ್ಕೆ ಧಾರ್ಮಿಕ ಕಾರ್ಯ ಪ್ರಾರಂಭವಾಗುತ್ತವೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ನಡೆಯಲಿವೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…