ಮೈಸೂರು

ನಾಳೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಮೈಸೂರು : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಜು.17ರಂದು ನಡೆಯಲಿರುವ ಶ್ರೀ ಚಾಮುಂಡೇಶ್ವರಿ ವರ್ಧಂತಿಗೆ ಚಾಮುಂಡೇಶ್ವರಿ ಪ್ರಾಧಿಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಮುಂಜಾನೆ 4 ಗಂಟೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ ಆರಂಭಗೊಳ್ಳಲಿವೆ. ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಗುತ್ತದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿವಿಧೆಡೆ ಪ್ರಸಾದ ವಿನಿಯೋಗ
ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ನಗರದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲು ಜನರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಸಾದ ವಿನಿಯೋಗವೂ ನಡೆಯಲಿದೆ. ನಗರದ ಪ್ರಮುಖ ಬಡಾವಣೆಗಳು, ಬೆಟ್ಟದ ಪಾದ, ಆಟೋ ನಿಲ್ದಾಣಗಳು, ವೃತ್ತಗಳಲ್ಲಿ ಶಾಮಿಯಾನ ಹಾಕಿ ಚಾಮುಂಡೇಶ್ವರಿ ವರ್ಧಂತಿ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ಉಪಾಹಾರ ವಿತರಣೆ ಮಾಡಲಾಗುತ್ತದೆ. ಕೆಲವರು ಕಲ್ಯಾಣ ಮಂಟಪಗಳಲ್ಲಿ ಚಾಮುಂಡೇಶ್ವರಿ ದೇವತೆಗೆ ಪೂಜೆ ಸಲ್ಲಿಸಿ ಅನ್ನಸತಂರ್ಪಣೆ ಮಾಡುತ್ತಾರೆ ಇದಕ್ಕಾಗಿ ಆಮಂತ್ರಣ ಪತ್ರಿಕೆಯನ್ನೂ ಮುದ್ರಿಸಿದ್ದಾರೆ.

ಜು.18ರಂದು ಕಡೇ ಆಷಾಢ ಶುಕ್ರವಾರವಾಗಿದ್ದು, ಅಂದು ಚಾಮುಂಡೇಶ್ವರಿ ದೇವಾಲಯದಲ್ಲಿ ಬೆಳಗಿನ ಜಾವ 3.30ಕ್ಕೆ ಧಾರ್ಮಿಕ ಕಾರ್ಯ ಪ್ರಾರಂಭವಾಗುತ್ತವೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ನಡೆಯಲಿವೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago