ಮೈಸೂರು

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ : ಬೆಟ್ಟದಲ್ಲಿ ಮನೆಮಾಡಿದ ಸಂಭ್ರಮ

ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.

ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.

ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.

lokesh

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

57 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

60 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

1 hour ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

4 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

4 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

4 hours ago