ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.
ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.
ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…