ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.
ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.
ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…