ಮೈಸೂರು

ರಾಜಮನೆತನದ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ : ಜಿ.ಟಿ.ದೇವೇಗೌಡ

ಮೈಸೂರು : ಮೈಸೂರು ಪ್ರಾಂತ್ಯಕ್ಕೆ ರಾಜಮನೆತನ ನೀಡಿರುವ ಕೊಡುಗೆಯ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಹೋರಾಟಕ್ಕೆ, ಕಾಂಗ್ರೆಸ್‌ ಪಕ್ಷದ ಪ್ರತಿಷ್ಠಾಪನೆಗೆ, ಬಿಜೆಪಿ ಪಕ್ಷಕ್ಕೆ ನೆಲೆ ನೀಡರುವಂತ ಪ್ರಾಂತ್ಯ ನಮ್ಮ ಮೈಸೂರು.  ಇಂಥ ಸ್ಥಳದಿಂದ ನಮ್ಮ ಯುವರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆಗೆ ನಿಂತಿದ್ದಾರೆ. ಯುವರಾಜರು ನನ್ನ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಮತದಾರರ ಬಳಿಗೆ ಬಂದಿದ್ದಾರೆ ಎಂದರು.

ಯಾವುದೇ ಆಸೆ ಆಮಿಶಗಳು ಬರಲಿ, ರಾಜಮನೆತನ ನೀಡಿರುವ ಕೊಡುಗೆಯನ್ನು ನಾವು ತೀರಿಸಲಿಕ್ಕೆ ಸಾಧ್ಯವಿಲ್ಲ.  ನಮ್ಮ ತಾತ, ತಂದೆ ಹಾಗೂ ನಾವೆಲ್ಲರು ಅವರ ಕೊಡುಗೆಗಳನ್ನು ಅನುಭವಿಸಿದ್ದೇವೆ. ಹೀಗಾಗಿ ಯುವರಾಜರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಅವರ ಋಣ ತೀರಿಸುವ ಅವಕಾಶ ಬಂದಿದೆ ಎಂದರು.

ಚುನಾವಣೆಯಲ್ಲಿ ವಿಜಯ ಸಾಧಿಸಿದರೆ ಹಿಂದೆ ಯಾವುದೇ ಸಂಸದ, ಶಾಸಕ, ಮಂತ್ರಿಗಳು ಮಾಡ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಓಟು ಯುವರಾಜರಿಗೆ, ಜೆಡಿಎಸ್‌ ಓಟು ಬಿಜೆಪಿಗೆ, ಮಂಡ್ಯದಲ್ಲಿ ನಮ್ಮ ಓಟು ಜೆಡಿಎಸ್‌ಗೆ, ಚಾಮರಾಜನಗರದಲ್ಲಿ ನಮ್ಮ ಓಟು ಬಿಜೆಪಿಗೆ ಎಂಬುದನ್ನು ಮನಸ್ಸಿನಲ್ಲಿ ನಿಶ್ಚಯ ಮಾಡಿಕೊಂಡು, ಗಟ್ಟಿ ನಿರ್ಧಾರ ಮಾಡಿಕೊಳ್ಳಿ ಎಂದು ಮೈಸೂರು-ಕೊಡಗು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

 

andolanait

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

8 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago