ಮೈಸೂರು

ರಾಜಮನೆತನದ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ : ಜಿ.ಟಿ.ದೇವೇಗೌಡ

ಮೈಸೂರು : ಮೈಸೂರು ಪ್ರಾಂತ್ಯಕ್ಕೆ ರಾಜಮನೆತನ ನೀಡಿರುವ ಕೊಡುಗೆಯ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಹೋರಾಟಕ್ಕೆ, ಕಾಂಗ್ರೆಸ್‌ ಪಕ್ಷದ ಪ್ರತಿಷ್ಠಾಪನೆಗೆ, ಬಿಜೆಪಿ ಪಕ್ಷಕ್ಕೆ ನೆಲೆ ನೀಡರುವಂತ ಪ್ರಾಂತ್ಯ ನಮ್ಮ ಮೈಸೂರು.  ಇಂಥ ಸ್ಥಳದಿಂದ ನಮ್ಮ ಯುವರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆಗೆ ನಿಂತಿದ್ದಾರೆ. ಯುವರಾಜರು ನನ್ನ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಮತದಾರರ ಬಳಿಗೆ ಬಂದಿದ್ದಾರೆ ಎಂದರು.

ಯಾವುದೇ ಆಸೆ ಆಮಿಶಗಳು ಬರಲಿ, ರಾಜಮನೆತನ ನೀಡಿರುವ ಕೊಡುಗೆಯನ್ನು ನಾವು ತೀರಿಸಲಿಕ್ಕೆ ಸಾಧ್ಯವಿಲ್ಲ.  ನಮ್ಮ ತಾತ, ತಂದೆ ಹಾಗೂ ನಾವೆಲ್ಲರು ಅವರ ಕೊಡುಗೆಗಳನ್ನು ಅನುಭವಿಸಿದ್ದೇವೆ. ಹೀಗಾಗಿ ಯುವರಾಜರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಅವರ ಋಣ ತೀರಿಸುವ ಅವಕಾಶ ಬಂದಿದೆ ಎಂದರು.

ಚುನಾವಣೆಯಲ್ಲಿ ವಿಜಯ ಸಾಧಿಸಿದರೆ ಹಿಂದೆ ಯಾವುದೇ ಸಂಸದ, ಶಾಸಕ, ಮಂತ್ರಿಗಳು ಮಾಡ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಓಟು ಯುವರಾಜರಿಗೆ, ಜೆಡಿಎಸ್‌ ಓಟು ಬಿಜೆಪಿಗೆ, ಮಂಡ್ಯದಲ್ಲಿ ನಮ್ಮ ಓಟು ಜೆಡಿಎಸ್‌ಗೆ, ಚಾಮರಾಜನಗರದಲ್ಲಿ ನಮ್ಮ ಓಟು ಬಿಜೆಪಿಗೆ ಎಂಬುದನ್ನು ಮನಸ್ಸಿನಲ್ಲಿ ನಿಶ್ಚಯ ಮಾಡಿಕೊಂಡು, ಗಟ್ಟಿ ನಿರ್ಧಾರ ಮಾಡಿಕೊಳ್ಳಿ ಎಂದು ಮೈಸೂರು-ಕೊಡಗು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

 

andolanait

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

51 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

1 hour ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago