ಮೈಸೂರು

ರಾಜಮನೆತನದ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ : ಜಿ.ಟಿ.ದೇವೇಗೌಡ

ಮೈಸೂರು : ಮೈಸೂರು ಪ್ರಾಂತ್ಯಕ್ಕೆ ರಾಜಮನೆತನ ನೀಡಿರುವ ಕೊಡುಗೆಯ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಹೋರಾಟಕ್ಕೆ, ಕಾಂಗ್ರೆಸ್‌ ಪಕ್ಷದ ಪ್ರತಿಷ್ಠಾಪನೆಗೆ, ಬಿಜೆಪಿ ಪಕ್ಷಕ್ಕೆ ನೆಲೆ ನೀಡರುವಂತ ಪ್ರಾಂತ್ಯ ನಮ್ಮ ಮೈಸೂರು.  ಇಂಥ ಸ್ಥಳದಿಂದ ನಮ್ಮ ಯುವರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆಗೆ ನಿಂತಿದ್ದಾರೆ. ಯುವರಾಜರು ನನ್ನ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಮತದಾರರ ಬಳಿಗೆ ಬಂದಿದ್ದಾರೆ ಎಂದರು.

ಯಾವುದೇ ಆಸೆ ಆಮಿಶಗಳು ಬರಲಿ, ರಾಜಮನೆತನ ನೀಡಿರುವ ಕೊಡುಗೆಯನ್ನು ನಾವು ತೀರಿಸಲಿಕ್ಕೆ ಸಾಧ್ಯವಿಲ್ಲ.  ನಮ್ಮ ತಾತ, ತಂದೆ ಹಾಗೂ ನಾವೆಲ್ಲರು ಅವರ ಕೊಡುಗೆಗಳನ್ನು ಅನುಭವಿಸಿದ್ದೇವೆ. ಹೀಗಾಗಿ ಯುವರಾಜರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಅವರ ಋಣ ತೀರಿಸುವ ಅವಕಾಶ ಬಂದಿದೆ ಎಂದರು.

ಚುನಾವಣೆಯಲ್ಲಿ ವಿಜಯ ಸಾಧಿಸಿದರೆ ಹಿಂದೆ ಯಾವುದೇ ಸಂಸದ, ಶಾಸಕ, ಮಂತ್ರಿಗಳು ಮಾಡ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಓಟು ಯುವರಾಜರಿಗೆ, ಜೆಡಿಎಸ್‌ ಓಟು ಬಿಜೆಪಿಗೆ, ಮಂಡ್ಯದಲ್ಲಿ ನಮ್ಮ ಓಟು ಜೆಡಿಎಸ್‌ಗೆ, ಚಾಮರಾಜನಗರದಲ್ಲಿ ನಮ್ಮ ಓಟು ಬಿಜೆಪಿಗೆ ಎಂಬುದನ್ನು ಮನಸ್ಸಿನಲ್ಲಿ ನಿಶ್ಚಯ ಮಾಡಿಕೊಂಡು, ಗಟ್ಟಿ ನಿರ್ಧಾರ ಮಾಡಿಕೊಳ್ಳಿ ಎಂದು ಮೈಸೂರು-ಕೊಡಗು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

 

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 mins ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 mins ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

25 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

31 mins ago