ಮೈಸೂರು

ಚಾಮುಂಡಿ ಪ್ರಾಧಿಕಾರ ಜಟಾಪಟಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ ಎಂದ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ. ಅದರ ಪ್ರಾಧಿಕಾರಿ ಮಾಡುವುದು ಕಾನೂನು ಬದ್ಧವಲ್ಲ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ವಿರೋಧ ವ್ಯಕ್ತಪಡಿಸಿದರು.

ಈ ಕುರಿತು ಸೋಮವಾರ(ಆ.12) ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ, ಹೀಗಾಗಿ ಕೋರ್ಟ್‌ ಮೊರೆ ಹೋಗಲಾಗಿದೆ. ಪ್ರಾಧಿಕಾರದ ಹೆಸರಲ್ಲಿ ಸರ್ಕಾರ ರೂಲಿಂಗ್‌ ಮಾಡಲು ಆಗುವುದಿಲ್ಲ. ದೇವಸ್ಥಾನದಲ್ಲಿ ಸಮಸ್ಯೆ ಆದಾಗ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ಹೇಳಿದ್ದಾರೆ.

ದೇವಸ್ಥಾನ ಖಾಸಗಿ ಆಸ್ತಿ ಅಂತ ಸರ್ಕಾರಕ್ಕೂ ಗೊತ್ತಿದೆ. ಚಾಮುಂಡಿ ಬೆಟ್ಟ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸರ್ಕಾರಕ್ಕೆ ಪತ್ರ ಬರೆದಿದ್ದು ನಿಜ. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದು. ಆದರೆ ನೀವೆ ಸ್ವಂತ ಮಾಡಿಕೊಳ್ಳಿ ಅಂತಾ ನಾವು ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ಹೆಚ್ಚೇನು ಮಾತಾಡೋದಿಲ್ಲ. ನ್ಯಾಯಾಲಯ ಹಾಗೂ ಸರ್ಕಾರ ಈಗಲೂ ಗ್ರೀನ್‌ ಸಿಗ್ನಲ್‌ ಕೊಟ್ಟರೆ ಚಾಮುಂಡಿ ಬೆಟ್ಟವನ್ನು ನಾವೇ ನಿರ್ವಹಣೆ ಮಾಡ್ತೇವೆ. ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೊಳ್ಳಬೇಕು ಅನ್ನೋದು ನಮ್ಮ ವಾದ ಎಂದರು.

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. 2001ರ ಕೇಸ್‌ನ ತೀರ್ಪು ನಮ್ಮ ಪರ ಬಂದರೆ ನಾವೇ ನಿರ್ವಹಿಸುತ್ತೇವೆ. ಪೂರ್ವಜರ ಹಾದಿಯಲ್ಲೇ ಸಾಗುತ್ತಿದ್ದೇವೆ, ಬೇರೆ ಮಾರ್ಗದಲ್ಲಿ ಹೋಗಲ್ಲ. ಚಾಮುಂಡಿಬೆಟ್ಟ ಉಳಿಸಿಕೊಳ್ಳಲು ಹೊರಟಿದ್ದೇವೆ. ಬೆಟ್ಟ ಬೆಟ್ಟದ ರೀತಿ ಇರಲಿ. ವಯನಾಡು, ಕೊಡಗು ರೀತಿ ಆಗದೆ ಇರಲಿ ಎನ್ನುವುದು ನಮ್ಮ ಉದ್ದೇಶ. 1950 ರಲ್ಲಿ ಖಾಸಗಿ ಪ್ರಾಪರ್ಟಿ ಲಿಸ್ಟ್‌ ಮಾಡಿದ್ದರು, ಆವಾಗ ಲಿಸ್ಟ್‌ನಲ್ಲಿ ಕೊಟ್ಟಿದ್ದು ಬಿಟ್ಟು ಬೇರೆನೂ ನಾವು ಇಟ್ಟುಕೊಂಡಿಲ್ಲ. ಅನೇಕ ಕಾರ್ಖಾನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಅದನ್ನ ಕೇಳಿದ್ದೇವಾ? ಬೇರೆ ಏನನ್ನೂ ಕೇಳುತ್ತಿಲ್ಲ. ಸರ್ಕಾರ ಬದಲಾದಾಗ ಪರಿಸ್ಥಿತಿ ಸಹ ಬದಲಾಗುತ್ತಿದೆ. ಪ್ರಾಧಿಕಾರ ಮಾಡಿರುವುದು ಸರಿಯಲ್ಲ, ಸರ್ಕಾರದ ಈ ನಡೆ ಸರಿಯಿಲ್ಲ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago