ಮೈಸೂರು

ಚಾಮುಂಡಿ ಪ್ರಾಧಿಕಾರ ಜಟಾಪಟಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ ಎಂದ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ. ಅದರ ಪ್ರಾಧಿಕಾರಿ ಮಾಡುವುದು ಕಾನೂನು ಬದ್ಧವಲ್ಲ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ವಿರೋಧ ವ್ಯಕ್ತಪಡಿಸಿದರು.

ಈ ಕುರಿತು ಸೋಮವಾರ(ಆ.12) ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ, ಹೀಗಾಗಿ ಕೋರ್ಟ್‌ ಮೊರೆ ಹೋಗಲಾಗಿದೆ. ಪ್ರಾಧಿಕಾರದ ಹೆಸರಲ್ಲಿ ಸರ್ಕಾರ ರೂಲಿಂಗ್‌ ಮಾಡಲು ಆಗುವುದಿಲ್ಲ. ದೇವಸ್ಥಾನದಲ್ಲಿ ಸಮಸ್ಯೆ ಆದಾಗ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ಹೇಳಿದ್ದಾರೆ.

ದೇವಸ್ಥಾನ ಖಾಸಗಿ ಆಸ್ತಿ ಅಂತ ಸರ್ಕಾರಕ್ಕೂ ಗೊತ್ತಿದೆ. ಚಾಮುಂಡಿ ಬೆಟ್ಟ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸರ್ಕಾರಕ್ಕೆ ಪತ್ರ ಬರೆದಿದ್ದು ನಿಜ. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದು. ಆದರೆ ನೀವೆ ಸ್ವಂತ ಮಾಡಿಕೊಳ್ಳಿ ಅಂತಾ ನಾವು ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ಹೆಚ್ಚೇನು ಮಾತಾಡೋದಿಲ್ಲ. ನ್ಯಾಯಾಲಯ ಹಾಗೂ ಸರ್ಕಾರ ಈಗಲೂ ಗ್ರೀನ್‌ ಸಿಗ್ನಲ್‌ ಕೊಟ್ಟರೆ ಚಾಮುಂಡಿ ಬೆಟ್ಟವನ್ನು ನಾವೇ ನಿರ್ವಹಣೆ ಮಾಡ್ತೇವೆ. ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೊಳ್ಳಬೇಕು ಅನ್ನೋದು ನಮ್ಮ ವಾದ ಎಂದರು.

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. 2001ರ ಕೇಸ್‌ನ ತೀರ್ಪು ನಮ್ಮ ಪರ ಬಂದರೆ ನಾವೇ ನಿರ್ವಹಿಸುತ್ತೇವೆ. ಪೂರ್ವಜರ ಹಾದಿಯಲ್ಲೇ ಸಾಗುತ್ತಿದ್ದೇವೆ, ಬೇರೆ ಮಾರ್ಗದಲ್ಲಿ ಹೋಗಲ್ಲ. ಚಾಮುಂಡಿಬೆಟ್ಟ ಉಳಿಸಿಕೊಳ್ಳಲು ಹೊರಟಿದ್ದೇವೆ. ಬೆಟ್ಟ ಬೆಟ್ಟದ ರೀತಿ ಇರಲಿ. ವಯನಾಡು, ಕೊಡಗು ರೀತಿ ಆಗದೆ ಇರಲಿ ಎನ್ನುವುದು ನಮ್ಮ ಉದ್ದೇಶ. 1950 ರಲ್ಲಿ ಖಾಸಗಿ ಪ್ರಾಪರ್ಟಿ ಲಿಸ್ಟ್‌ ಮಾಡಿದ್ದರು, ಆವಾಗ ಲಿಸ್ಟ್‌ನಲ್ಲಿ ಕೊಟ್ಟಿದ್ದು ಬಿಟ್ಟು ಬೇರೆನೂ ನಾವು ಇಟ್ಟುಕೊಂಡಿಲ್ಲ. ಅನೇಕ ಕಾರ್ಖಾನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಅದನ್ನ ಕೇಳಿದ್ದೇವಾ? ಬೇರೆ ಏನನ್ನೂ ಕೇಳುತ್ತಿಲ್ಲ. ಸರ್ಕಾರ ಬದಲಾದಾಗ ಪರಿಸ್ಥಿತಿ ಸಹ ಬದಲಾಗುತ್ತಿದೆ. ಪ್ರಾಧಿಕಾರ ಮಾಡಿರುವುದು ಸರಿಯಲ್ಲ, ಸರ್ಕಾರದ ಈ ನಡೆ ಸರಿಯಿಲ್ಲ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

6 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

6 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

6 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

6 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

6 hours ago